ಪ್ರಭಾವಿ ರಾಜಕಾರಣಿಗಳ ಸ್ನೇಹದ ಸೋಗಿನಲ್ಲಿ ಜನರಿಗೆ ಕಡಿಮೆ ಬೆಲೆಗೆ ಚಿನ್ನ ಕೊಡಿಸುವುದಾಗಿ ನಂಬಿಸಿ ಸುಮಾರು 20 ಕೋಟಿ ರು. ವಂಚಿಸಿದ ಆರೋಪದಡಿ ಮಹಿಳೆ ಸೇರಿದಂತೆ ಇಬ್ಬರನ್ನು ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

10 Jul 2025
ರಾಜ್ಯ

ಬೆಂಗಳೂರು ಜುಲೈ.10:ಕೀರ್ಲೋಸ್ಕರ್‌ ಕಾಲೋನಿಯ ಗೃಹ ಲಕ್ಷ್ಮೀ ಲೇಔಟ್‌ ನಿವಾಸಿ ಸವಿತಾ ಹಾಗೂ ಸುಂಕದಕಟ್ಟೆಯ ಶ್ರೀನಿವಾಸ ನಗರದ ಪುನೀತ್ ಬಂಧಿತರಾಗಿದ್ದು, ಆರೋಪಿಗಳಿಂದ ಹಣ ಹಾಗೂ ಕೆಲ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.ಈ ವಂಚನೆ ಜಾಲದಲ್ಲಿ ತಪ್ಪಿಸಿಕೊಂಡಿರುವ ಸಂಗೀತ ನಿರ್ದೇಶಕ ಸೇರಿದಂತೆ ಕೆಲ ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.


ಬಸವೇಶ್ವರನಗರದ ಕುಸುಮಾ ಅವರಿಗೆ ಕಡಿಮೆ ಬೆಲೆಗೆ ಆಭರಣ ಹಾಗೂ ಖಾಸಗಿ ಮನರಂಜನಾ ವಾಹಿನಿಯಲ್ಲಿ ಟೆಂಡರ್ ಕೊಡಿಸುವುದಾಗಿ ನಂಬಿಸಿ 95 ಲಕ್ಷ ರು. ಪಡೆದು ಸವಿತಾ ಟೋಪಿ ಹಾಕಿದ್ದರು. ಈ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಕಿಟ್ಟಿ ಪಾರ್ಟಿಗಳಲ್ಲಿ ಗಾಳ:


ತನ್ನ ಕುಟುಂಬದ ಜತೆ ಕೀರ್ಲೋಸ್ಕರ್ ಕಾಲೋನಿಯಲ್ಲಿ ಸವಿತಾ ನೆಲೆಸಿದ್ದಳು. ತನ್ನನ್ನು ಪ್ರಭಾವಿ ಮಹಿಳೆ ಎನ್ನುವಂತೆ ಆಕೆ ಬಿಂಬಿಸಿಕೊಂಡಿದ್ದಳು. ಅಲ್ಲದೆ ತನಗೆ ಪ್ರಭಾವಿ ರಾಜಕಾರಣಿಗಳು, ಅಧಿಕಾರಿಗಳು ಹಾಗೂ ಗಣ್ಯರ ಪರಿಚಯವಿದೆ ಎಂದು ಸಹ ಆಕೆ ಹೇಳಿಕೊಂಡಿದ್ದಳು. ಇದೇ ಸೋಗಿನಲ್ಲಿ ಶ್ರೀಮಂತರ ಕುಟುಂಬಗಳ ಸ್ನೇಹವನ್ನು ಸವಿತಾ ಮಾಡಿದ್ದಳು. ತನ್ನ ನಾಜೂಕಿನ ಮಾತುಗಳ ಮೂಲಕ ಜನರನ್ನು ಮರಳು ಮಾಡಿ ವಂಚನೆ ಖೆಡ್ಡಾಕ್ಕೆ ಕೆಡುವುತ್ತಿದ್ದಳು. ಹಾಗೆಯೇ ಮನೆಯಲ್ಲಿ ಕಿಟ್ಟಿ ಪಾರ್ಟಿಗಳನ್ನು ಆಯೋಜಿಸಿ ಸಿರಿವಂತ ಕುಟುಂಬದ ಮಹಿಳೆಯರನ್ನು ಆಹ್ವಾನಿಸಿದ್ದಳು. ಆಗ ಕಡಿಮೆ ಬೆಲೆ ಚಿನ್ನ ಕೊಡಿಸುವುದಾಗಿ ಹೇಳಿ ಹಣ ಪಡೆದು ಆಕೆ ನಾಮ ಹಾಕುತ್ತಿದ್ದಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅದೇ ರೀತಿ ಬಸವೇಶ್ವರನಗರದ ಕುಸುಮಾ ಅವರಿಗೆ ಖಾಸಗಿ ವಾಹಿನಿಯಲ್ಲಿ ಟೆಂಡರ್ ಹಾಗೂ ಕಡಿಮೆಗೆ ಬೆಲೆ ಬಂಗಾರ ಕೊಡಿಸುವ ನೆಪದಲ್ಲಿ 90 ಲಕ್ಷ ರು ಪಡೆದು ಸವಿತಾ ವಂಚಿಸಿದ್ದಳು. ಈ ಬಗ್ಗೆ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



ಅದೇ ರೀತಿ ಬಸವೇಶ್ವರನಗರದ ಕುಸುಮಾ ಅವರಿಗೆ ಖಾಸಗಿ ವಾಹಿನಿಯಲ್ಲಿ ಟೆಂಡರ್ ಹಾಗೂ ಕಡಿಮೆಗೆ ಬೆಲೆ ಬಂಗಾರ ಕೊಡಿಸುವ ನೆಪದಲ್ಲಿ 90 ಲಕ್ಷ ರು ಪಡೆದು ಸವಿತಾ ವಂಚಿಸಿದ್ದಳು. ಈ ಬಗ್ಗೆ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


20 ಕೋಟಿ ರು. ವಂಚನೆ:


ಮಾರುಕಟ್ಟೆ ಬೆಲೆಗಿಂತ ಕಡಿಮೆ ದರದಲ್ಲಿ ಚಿನ್ನ ಕೊಡಿಸುವ ನೆಪದಲ್ಲಿ ಜನರಿಗೆ ಸುಮಾರು 20 ಕೋಟಿ ರು.ಗಳಿಗೂ ಹೆಚ್ಚು ಹಣವನ್ನು ಸವಿತಾ ವಂಚಿಸಿರುವ ಬಗ್ಗೆ ತನಿಖೆಯಲ್ಲಿ ಪತ್ತೆಯಾಗಿದೆ. ಈಕೆಯಿಂದ ಮೋಸಕ್ಕೊಳಗಾದವರು ದೂರು ನೀಡಿದರೆ ಪರಿಶೀಲಿಸಿ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಈ ಹಿಂದೆ ಗೋವಿಂದರಾಜನಗರ ಠಾಣೆಯಲ್ಲಿ ಮಹಿಳೆಯೊಬ್ಬರು ದೂರು ಕೊಟ್ಟಿದ್ದರು. ಆಗ ಸವಿತಾಳಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಾಗಿತ್ತು. ಆದರೆ ಅಷ್ಟರಲ್ಲಿ ರಾಜಿ ಸಂಧಾನ ಮೂಲಕ ವಿವಾದ ಪರಿಹರಿಸಿಕೊಳ್ಳುವುದಾಗಿ ಹೇಳಿ ಸಂತ್ರಸ್ತ ಮಹಿಳೆ ದೂರು ಹಿಂಪಡೆದರು ಎಂದು ಅಧಿಕಾರಿಗಳು ಹೇಳಿದ್ದಾರೆ.


ಸವಿತಾಳ ವ್ಯವಸ್ಥಿತ ವಂಚನೆ ಜಾಲ:


ತನ್ನ ವಂಚನೆಗೆ ವ್ಯವಸ್ಥಿತ ಸಂಘಟನೆಯನ್ನು ಸವಿತಾ ಕಟ್ಟಿದ್ದಳು. ಶ್ರೀಮಂತರ ಮಹಿಳೆಯರನ್ನು ಗಾಳ ಹಾಕಲು ಆಕೆಗೆ ಓರ್ವ ಚಲನಚಿತ್ರ ನಿರ್ದೇಶಕ ಸಹ ಸಾಥ್ ಕೊಟ್ಟಿದ್ದಾನೆ. ಇನ್ನು ಬಂಧಿತ ಆರೋಪಿ ಪುನೀತ್‌ ಹಣ ಸಂಗ್ರಹಿಸುವ ಕೆಲಸ ಮಾಡುತ್ತಿದ್ದ ಎಂದು ಮೂಲಗಳು ಹೇಳಿವೆ.


ಸಿಎಂ, ಡಿಸಿಎಂ ಜತೆ ಫೋಟೋಗಳು:


ತನಗೆ ಪ್ರಭಾವಿ ರಾಜಕಾರಣಿಗಳ ಪರಿಚಯವಿದೆ ಎಂದು ಬಿಂಬಿಸಲು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಮಾಜಿ ಮುಖ್ಯಮಂತ್ರಿಗಳು, ಸಂಸದರು ಹಾಗೂ ಶಾಸಕರ ಜತೆ ತೆಗೆಸಿಕೊಂಡಿದ್ದ ಪೋಟೋಗಳನ್ನು ಸವಿತಾ ತೋರಿಸುತ್ತಿದ್ದಳು. ಕೆಲ ಸಿನಿಮಾ ನಟ-ನಟಿಯರ ಜತೆ ಸಹ ಆಕೆಯ ಪೋಟೋಗಳಿವೆ ಎಂದು ತಿಳಿದು ಬಂದಿದೆ.

Recently Updated:

ಕುಂದಾಪುರದಲ್ಲಿ  ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ  ವೈದ್ಯನ ಅಟ್ಟಹಾಸ.!   ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..ಕುಂದಾಪುರದಲ್ಲಿ ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ ವೈದ್ಯನ ಅಟ್ಟಹಾಸ.! ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..
ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..
ಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್  ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!!  ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್ ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!! ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯ
ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗ
ಧರ್ಮದ ಹೊಲದಲ್ಲಿ ಭತ್ತದ ಫಸಲು  ಅನ್ನವೂ ಧರ್ಮ ನೆಲವೂ ಧರ್ಮ’  ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ   ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..ಧರ್ಮದ ಹೊಲದಲ್ಲಿ ಭತ್ತದ ಫಸಲು ಅನ್ನವೂ ಧರ್ಮ ನೆಲವೂ ಧರ್ಮ’ ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ  ಉಡುಪಿ ಪ್ರಥಮ ಸ್ಥಾನ  ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಉಡುಪಿ ಪ್ರಥಮ ಸ್ಥಾನ ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.
ಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ  ಬಿಜೆಪಿಯ ರಾಜ್ಯ  ಮೋರ್ಚಾ ಉಪಾಧ್ಯಕ್ಷರು.  ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ ಬಿಜೆಪಿಯ ರಾಜ್ಯ ಮೋರ್ಚಾ ಉಪಾಧ್ಯಕ್ಷರು. ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ