ಶ್ರೀ ಕುಮಾರ್ ಮಾರುತಿ ಸೂರ್ಯವಂಶಿ ಇವರನ್ನು ಬಹಳ ಅದ್ದೂರಿಯಿಂದ ಸ್ವಾಗತಿಸಿ ಅಭಿನಂದಿಸಲಾಯಿತು ಇವರು ಸುಮಾರು 30 ವರ್ಷಗಳ ಕಾಲ ಸೇವೆ ಸಲ್ಲಿಸಿ ಐದು ದೇಶಗಳಲ್ಲಿ ಸೇವೆ ಮಾಡಿ ತಾಯ್ನಾಡಿಗೆ ಹಿಂದಿರುಗಿದ್ದು ಬಹಳ ಸಂತೋಷದ ವಿಷಯ ಎಂದು ಇಡೀ ಗ್ರಾಮವೇ ವಿಜೃಂಭಣೆಯಿಂದ ಈ ಒಂದು ಕಾರ್ಯಕ್ರಮವನ್ನು ಮಾಡಿದರು ಈ ಕಾರ್ಯಕ್ರಮದಲ್ಲಿ ಅಥಣಿಯ ಮಾಜಿ ಶಾಸಕರಾದ ಶ್ರೀ ಶಹಜಾನ್ ಡೊಂಗರಗಾಂವ ಮಾತನಾಡಿ ಜೈ ಜವಾನ್ ಜೈ ಕಿಸಾನ್ ಎಂಬ ಶ್ಲೋಕವನ್ನು ಅಂದಿನ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಜಿಯವರು ಹೇಳಿದ್ದನ್ನು ಸ್ಮರಿಸಿದರು ಭಾರತ ದೇಶಕ್ಕೆ ಸೈನಿಕ ಮತ್ತು ರೈತ ಇವರಿಬ್ಬರೂ ಎರಡು ಕಣ್ಣುಗಳಿದ್ಧಂತೆ ಎಂದು ಸವಿಸ್ತಾರವಾಗಿ ಹೇಳಿದರು ಸೈನಿಕನು ನಮ್ಮ ದೇಶವನ್ನು ಕಾಯಲಿಲ್ಲ ಅಂದರೆ ನಾವು ಇವತ್ತು ಈ ಒಂದು ಸುಖವಾದ ಜೀವನವನ್ನು ನಡೆಸಲು ಸಾಧ್ಯವಾಗುತ್ತಿರಲಿಲ್ಲ ನಮ್ಮ ದೇಶದಲ್ಲಿ ಹಲವಾರು ಪಕ್ಕದ ದೇಶಗಳು ನಮ್ಮ ಮೇಲೆ ದಾಳಿಯನ್ನು ಮಾಡಿದಾಗ ಅದಕ್ಕೆ ಪ್ರತ್ಯುತ್ತರವಾಗಿ ನಮ್ಮ ವೀರ ಯೋಧರು ಸಮರ್ಪಕವಾಗಿ ಉತ್ತರವನ್ನು ಕೊಟ್ಟು ವಿಜಯಶಾಲಿಯಾಗಿದ್ದನ್ನು ಸ್ಮರಿಸಿದ್ದರು ಇಂತಹ ಒಂದು ಯುದ್ಧಗಳಲ್ಲಿ ನಮ್ಮವರೇ ಹಲವಾರು ಹುತಾತ್ಮರಾಗಿದ್ದನ್ನು ಸ್ಮರಿಸುತ್ತಾ ಅವರಿಗೆ ಶ್ರದ್ದಾಂಜಲಿಯನ್ನು ಸಲ್ಲಿಸಿದರು ಮತ್ತು ರೈತನು ಸಹ ಭೂಮಿಯಲ್ಲಿ ಬೆಳೆಯನ್ನು ಬೆಳೆದಿದ್ದರೆ ನಮಗೆ ಅನ್ನವನ್ನು ಹಾಕದಿದ್ದರೆ ನಾವು ಜೀವಂತವಿರುವುದು ಬಹಳ ಕಷ್ಟ ಎಂದು ಹೇಳುತ್ತಾ ರೈತ ಹಾಗೂ ಸೈನಿಕ ನಮ್ಮ ದೇಶವನ್ನು ಕಾಪಾಡುವಲ್ಲಿ ಹಾಗೂ ಮುನ್ನಡೆ ಮುನ್ನಡೆಸುವಲ್ಲಿ ವಿಶೇಷ ಪಾತ್ರವನ್ನು ವಹಿಸಿದ್ದಾರೆ ಎಂದು ಹೇಳಿದರು ಈ ಒಂದು ಕಾರ್ಯಕ್ರಮದಲ್ಲಿ ಪೂಜ್ಯರು ಹಾಗೂ ಮಾಜಿ ಸೈನಿಕರು ಊರಿನ ಸಮಸ್ತ ಗ್ರಾಮದವರು ಉಪಸ್ಥಿತರಿದ್ದರು...
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಖೋತನಟ್ಟಿ ಗ್ರಾಮದಲ್ಲಿ 30 ವರ್ಷಗಳ ಕಾಲ ಭಾರತೀಯ ಭೂಸೇನೆಯಲ್ಲಿ ಸುಬೇದಾರರಾಗಿ ಸೇವೆ ಸಲ್ಲಿಸಿ ತನ್ನ ಸ್ವಗ್ರಾಮವಾದ ಖೋತನಟ್ಟಿಗೆ ಆಗಮಿಸಿದ ವೀರಯೋಧ.
Recently Updated:
ಕುಂದಾಪುರದಲ್ಲಿ ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ ವೈದ್ಯನ ಅಟ್ಟಹಾಸ.! ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..
ಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್ ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!! ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯ
ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗ
ಧರ್ಮದ ಹೊಲದಲ್ಲಿ ಭತ್ತದ ಫಸಲು ಅನ್ನವೂ ಧರ್ಮ ನೆಲವೂ ಧರ್ಮ’ ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಉಡುಪಿ ಪ್ರಥಮ ಸ್ಥಾನ ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.


