ಉಡುಪಿಗೆ ನಾಳೆ ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸುತ್ತಿದ್ದು, ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಆದಿ ಉಡುಪಿ ಮೈದಾನದಲ್ಲಿ ನಡೆಯಲಿರುವ 'ಲಕ್ಷ ಕಂಠ ಗೀತಾ ಪಠಣ' ಮಹಾಕಾರ್ಯಕ್ರಮದಲ್ಲಿ ಪ್ರಧಾನಿ ಭಾಗಿಯಾಗಲಿದ್ದಾರೆ. ಉಡುಪಿಯ ಶ್ರೀಕೃಷ್ಣ ಮಠದಲ್ಲೂ ದರ್ಶನ ಪಡೆಯಲಿದ್ದಾರೆ.

27 Nov 2025
ಕರಾವಳಿ

ಪ್ರಧಾನಿಗಳ ಆಗಮನಕ್ಕೆ ಸಂಬಂಧಿಸಿದಂತೆ ಆದಿ ಉಡುಪಿ ಮೈದಾನದಲ್ಲಿ ವಿಶೇಷವಾಗಿ ಮೂರು ಹೆಚ್ಚುವರಿ ಹೆಲಿಪ್ಯಾಡ್‌ಗಳನ್ನು ಸಿದ್ಧಪಡಿಸಲಾಗಿದೆ. ಬುಧವಾರ ದೆಹಲಿಯಿಂದ ಆಗಮಿಸಿದ ವಾಯುಸೇನೆಯ ಹಿರಿಯ ಅಧಿಕಾರಿಗಳ ತಂಡವು ಈ ಹೆಲಿಪ್ಯಾಡ್‌ಗಳ ಗುಣಮಟ್ಟ ಪರಿಶೀಲಿಸಿತು. ನಂತರ ವಾಯುಸೇನೆಯ ಮೂರು ಹೆಲಿಕಾಪ್ಟರ್‌ಗಳು ಉಡುಪಿ ಆಕಾಶದಲ್ಲಿ ಹಲವು ಬಾರಿ ಸುತ್ತು ಹೊಡೆದು, ಇಳಿಯುವಿಕೆ-ಟೇಕ್‌ಆಫ್ ರಿಹರ್ಸಲ್ ನಡೆಸಿದವು. ಯಾವುದೇ ತಾಂತ್ರಿಕ ತೊಂದರೆ ಇಲ್ಲದಿರುವುದನ್ನು ಅಧಿಕಾರಿಗಳು ದೃಢಪಡಿಸಿದ್ದಾರೆ.


ಪ್ರಧಾನಿ ಸವಾರಿ ಮಾಡಲಿರುವ ಆದಿ ಉಡುಪಿ ಮೈದಾನದಿಂದ ಶ್ರೀಕೃಷ್ಣ ಮಠದವರೆಗಿನ ಮಾರ್ಗದಲ್ಲಿ ವಾಹನ ಸಂಚಾರ ರಿಹರ್ಸಲ್ ನಡೆಯಲಿದೆ. ಈ ಮಾರ್ಗದಲ್ಲಿ ಎರಡು ಬಾರಿ ವಾಹನಗಳ ಚಲನೆಯನ್ನು ಪರೀಕ್ಷಿಸಲಾಗುವುದು. ಪ್ರಧಾನಿಗಳ ಸುರಕ್ಷತೆಗಾಗಿ ವಾಯುಸೇನೆ, ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಜೊತೆಗೆ ಕರ್ನಾಟಕ ರಾಜ್ಯ ಪೊಲೀಸ್‌ ಪಡೆಯನ್ನು ನಿಯೋಜಿಸಲಾಗಿದೆ. ಹೊರ ಜಿಲ್ಲೆಗಳಿಂದ ಸಾವಿರಾರು ಪೊಲೀಸರನ್ನು ಕರೆಸಲಾಗಿದೆ.


ಶುಕ್ರವಾರ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ರಥಬೀದಿ, ಶ್ರೀಕೃಷ್ಣ ಮಠ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಭಕ್ತರ ಪ್ರವೇಶವನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಈ ಅವಧಿಯಲ್ಲಿ ಯಾವುದೇ ಭಕ್ತರು ಒಳಗೆ ಪ್ರವೇಶಿಸಲು ಸಾಧ್ಯವಿಲ್ಲ. ಆದರೆ ಲಕ್ಷಕಂಠ ಕಾರ್ಯಕ್ರಮಕ್ಕೆ ಆಯ್ದ ಪಾಸ್ ಹೊಂದಿರುವವರಿಗೆ ಮಾತ್ರ ಅವಕಾಶವಿದೆ.


ಪ್ರಧಾನಿಗಳ ವೇಳಾಪಟ್ಟಿ


ಬೆಳಗ್ಗೆ 8.15ಕ್ಕೆ ದೆಹಲಿಯಿಂದ ಹೊರಟು 11:05ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲಿದ್ದಾರೆ.

11:10ಕ್ಕೆ ವಿಶೇಷ ಹೆಲಿಕಾಪ್ಟರ್‌ನಲ್ಲಿ ಹೊರಟು 11:35ಕ್ಕೆ ಉಡುಪಿಯ ಆದಿ ಉಡುಪಿ ಹೆಲಿಪ್ಯಾಡ್‌ಗೆ ಆಗಮನ.

ಮಧ್ಯಾಹ್ನ 12 ಗಂಟೆಗೆ ಶ್ರೀಕೃಷ್ಣ ದರ್ಶನ, ನಂತರ ಲಕ್ಷಕಂಠ ಗೀತಾ ಪಠಣ ಕಾರ್ಯಕ್ರಮದಲ್ಲಿ ಭಾಗಿ.

1:35 ಕ್ಕೆ ಕಾರಿನಲ್ಲಿ ಹೊರಟು 1:40ಕ್ಕೆ ಹೆಲಿಪ್ಯಾಡ್ ತಲುಪಿ, 2:10ಕ್ಕೆ ಮಂಗಳೂರಿಗೆ ತೆರಳಿ 2:15ಕ್ಕೆ ಗೋವಾಕ್ಕೆ ತೆರಳಲಿದ್ದಾರೆ.

ರಾಜ್ಯ ಬಿಜೆಪಿ ಘಟಕವು ಪ್ರಧಾನಿಯ ಭೇಟಿಯ ಸಮಯದಲ್ಲಿ ರೋಡ್ ಶೋ ನಡೆಸುವ ಯೋಜನೆ ರೂಪಿಸಿದ್ದರೂ, ದೆಹಲಿಯ ಪಿಎಂ ಕಚೇರಿಯು ಯಾವುದೇ ರೀತಿಯ ರೋಡ್ ಶೋಗೆ ಅನುಮತಿ ನೀಡಿಲ್ಲ. ಆದ್ದರಿಂದ, ಪ್ರಧಾನಿ ಮೋದಿ ನೇರವಾಗಿ ಕಾರ್ಯಕ್ರಮ ಸ್ಥಳಕ್ಕೆ ತೆರಳಿ, ಶ್ರೀ ಕೃಷ್ಣನ ದರ್ಶನ ಪಡೆದು, ಲಕ್ಷ ಕಂಠ ಗೀತ ಪಠಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂತಿರುಗಲಿದ್ದಾರೆ.

Recently Updated:

ಬಂಟ್ವಾಳ  KSRTC ಬಸ್.  ನಿಲ್ದಾಣದಲ್ಲೇ   ಯುವತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿ.. ಹಾಡಹಗಲೇ ಬಂಟ್ವಾಳದಲ್ಲಿ ಭೀಕರ ಕೃತ್ಯ   ಯುವತಿಯ ಅಮಾನುಷ ಹತ್ಯೆ!ಬಂಟ್ವಾಳ KSRTC ಬಸ್. ನಿಲ್ದಾಣದಲ್ಲೇ ಯುವತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿ.. ಹಾಡಹಗಲೇ ಬಂಟ್ವಾಳದಲ್ಲಿ ಭೀಕರ ಕೃತ್ಯ ಯುವತಿಯ ಅಮಾನುಷ ಹತ್ಯೆ!
ಕುಂದಾಪುರ ಹೆಸರಿಗೆ ತಾಲೂಕು ಕೇಂದ್ರ, ರೈಲ್ವೆ ಸ್ಟೇಷನ್‌ಗೆ ಮಾತ್ರ ಸಾರಿಗೆ ವ್ಯವಸ್ಥೆ ಇಲ್ಲ   ರೈಲ್ವೆ  ಸ್ಟೇಷನ್‌ಗೆ    ರೈಲು ಬರುತ್ತೆ, ಬಸ್ ಬರಲ್ಲ ಪ್ರಯಾಣಿಕರ ನಿತ್ಯದ ಗೋಳು...ಕುಂದಾಪುರ ಹೆಸರಿಗೆ ತಾಲೂಕು ಕೇಂದ್ರ, ರೈಲ್ವೆ ಸ್ಟೇಷನ್‌ಗೆ ಮಾತ್ರ ಸಾರಿಗೆ ವ್ಯವಸ್ಥೆ ಇಲ್ಲ ರೈಲ್ವೆ ಸ್ಟೇಷನ್‌ಗೆ ರೈಲು ಬರುತ್ತೆ, ಬಸ್ ಬರಲ್ಲ ಪ್ರಯಾಣಿಕರ ನಿತ್ಯದ ಗೋಳು...
ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಿಂದ ಗ್ರಾಮಗಳ ಸಮಗ್ರ ಪ್ರಗತಿಗೆ ವೇಗ : ಯಶ್ ಪಾಲ್ ಸುವರ್ಣ.ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಿಂದ ಗ್ರಾಮಗಳ ಸಮಗ್ರ ಪ್ರಗತಿಗೆ ವೇಗ : ಯಶ್ ಪಾಲ್ ಸುವರ್ಣ.
ಅಂತರ್ ಜಿಲ್ಲಾ ಭಜನಾ ಸ್ಪರ್ಧೆಯ ಅಂಗವಾಗಿ  ಶ್ರೀ ವಡಭಾಂಡೇಶ್ವರ ಬಲರಾಮ ದೇವತಾನದಿಂದ ಆನಂದ ಶರಧಿಗೆ ಭವ್ಯ ದೀಪದ ಶೋಭಾಯಾತ್ರೆ. ಅಂತರ್ ಜಿಲ್ಲಾ ಭಜನಾ ಸ್ಪರ್ಧೆಯ ಅಂಗವಾಗಿ ಶ್ರೀ ವಡಭಾಂಡೇಶ್ವರ ಬಲರಾಮ ದೇವತಾನದಿಂದ ಆನಂದ ಶರಧಿಗೆ ಭವ್ಯ ದೀಪದ ಶೋಭಾಯಾತ್ರೆ.
ಕತ್ತಲಲ್ಲಿ ಕಲ್ಮಶ: ಕರಾವಳಿಯ ಕಣ್ಣೀರ ಕಥೆ"* ಕಪ್ಪು, ಕೆಂಪು, ರಾಸಾಯನಿಕ ವಾಸನೆಯ ನೀರನ್ನು ನೇರವಾಗಿ ಅರಬ್ಬಿ ಸಮುದ್ರಕ್ಕೆ ಸುರಿಯುತ್ತಿವೆ.!!ಕತ್ತಲಲ್ಲಿ ಕಲ್ಮಶ: ಕರಾವಳಿಯ ಕಣ್ಣೀರ ಕಥೆ"* ಕಪ್ಪು, ಕೆಂಪು, ರಾಸಾಯನಿಕ ವಾಸನೆಯ ನೀರನ್ನು ನೇರವಾಗಿ ಅರಬ್ಬಿ ಸಮುದ್ರಕ್ಕೆ ಸುರಿಯುತ್ತಿವೆ.!!
ಕಾರ್ಕಳ: ಪೊಲೀಸರ ಮೇಲೆ ಕಾರು ಹರಿಸಲು ಯತ್ನಿಸಿದ ಐವರು ಕ್ರಿಕೆಟ್ ಬೆಟ್ಟಿಂಗ್ ಬುಕ್ಕಿಗಳ ಬಂಧನಕಾರ್ಕಳ: ಪೊಲೀಸರ ಮೇಲೆ ಕಾರು ಹರಿಸಲು ಯತ್ನಿಸಿದ ಐವರು ಕ್ರಿಕೆಟ್ ಬೆಟ್ಟಿಂಗ್ ಬುಕ್ಕಿಗಳ ಬಂಧನ
ಕೋಟ ಆನಂದ್ ಕುಂದರ್ ಮಾಲೀಕತ್ವದ ಜನತಾ ಫಿಶ್ ಮೀಲ್ ಕಾರ್ಮಿಕರಿಂದ  ತನ್ನ ಸಾಮಾಜಿಕ ಜವಾಬ್ದಾರಿಯ ಅಡಿಯಲ್ಲಿ, 'ಸ್ವಚ್ಛ ಭಾರತ' ಅಭಿಯಾನಕ್ಕೆ ಭಾರಿ ಬೆಂಬಲ ನೀಡುತ್ತಿದೆ...ಕೋಟ ಆನಂದ್ ಕುಂದರ್ ಮಾಲೀಕತ್ವದ ಜನತಾ ಫಿಶ್ ಮೀಲ್ ಕಾರ್ಮಿಕರಿಂದ ತನ್ನ ಸಾಮಾಜಿಕ ಜವಾಬ್ದಾರಿಯ ಅಡಿಯಲ್ಲಿ, 'ಸ್ವಚ್ಛ ಭಾರತ' ಅಭಿಯಾನಕ್ಕೆ ಭಾರಿ ಬೆಂಬಲ ನೀಡುತ್ತಿದೆ...
ನಿರ್ದಿಷ್ಟ ಸಮಯದಲ್ಲಿ, ಸಾಂದರ್ಭಿಕವಾಗಿ ಆರೋಗ್ಯ ತಪಾಸಣೆ ಅವಶ್ಯ - ಸುನಿಲ್‌ ಕುಮಾರ್‌.ನಿರ್ದಿಷ್ಟ ಸಮಯದಲ್ಲಿ, ಸಾಂದರ್ಭಿಕವಾಗಿ ಆರೋಗ್ಯ ತಪಾಸಣೆ ಅವಶ್ಯ - ಸುನಿಲ್‌ ಕುಮಾರ್‌.
ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧದ ಲೈಂಗಿಕ ಕಿರುಕುಳದ ಆರೋಪಗಳು ಸುಳ್ಳು ಮತ್ತು ದುರುದ್ದೇಶಪೂರಿತ ಎಂದು ಮಂಗಳೂರು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಲೈಂಗಿಕ ದೌರ್ಜನ್ಯದ ಆರೋಪಗಳಿಗೆ ಪುರಾವೆ ದೊರೆತಿಲ್ಲ.ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧದ ಲೈಂಗಿಕ ಕಿರುಕುಳದ ಆರೋಪಗಳು ಸುಳ್ಳು ಮತ್ತು ದುರುದ್ದೇಶಪೂರಿತ ಎಂದು ಮಂಗಳೂರು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಲೈಂಗಿಕ ದೌರ್ಜನ್ಯದ ಆರೋಪಗಳಿಗೆ ಪುರಾವೆ ದೊರೆತಿಲ್ಲ.