ಅಕ್ರಮ ಸಂಬಂಧದ ತಡೆಗೆ ಸಂಬಂಧಿಸಿದಂತೆ ನಡೆದ ಕೊಲೆಗೆ ಸಂಬಂಧಿಸಿದಂತೆ 24 ಗಂಟೆಗಳ ಒಳಗೆ ಬಂಧನ ಮಾಡಲಾಗಿದೆ.
ಕಮಲಾಕರ್ ಭಟ್ ವಿರುದ್ಧ ಅನೈತಿಕ ಸಂಬಂಧ ಆರೋಪ ಕೇಳಿ ಬಂದಿದೆ.
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಮಹೇಶ್ ನಾಯ್ಕ್ ಎಂಬುವವರ ಪತ್ನಿ ಸುಚಿತ್ರಾ ಎಂಬಾಕೆಯ ಜೊತೆ ಜ್ಯೋತಿಷಿ ಕಮಲಾಕರ್ ಭಟ್ ಅನೈತಿಕ ಸಂಬಂಧ ಹೊಂದಿದ್ರು ಎನ್ನುವ ಆರೋಪ ಕೇಳಿ ಬಂದಿದೆ. ಈ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನೇ ಕೊಲೆ ಮಾಡಲು ಹೆಂಡ್ತಿ ಸುಚಿತ್ರಾ ಹಾಗೂ ಜ್ಯೋತಿಷಿ ಕಮಲಾಕರ್ ಭಟ್ ಸೇರಿದಂತೆ ಕೆಲವರು ಪ್ಲಾನ್ ಮಾಡಿದ್ದರಂತೆ.
ಈ ಪ್ರಕರಣ ಸಂಬಂಧ ಖ್ಯಾತ ಜ್ಯೋತಿಷಿ ಪ್ಲಾನ್ನಲ್ಲಿ ಮಹೇಶ್ ನಾಯ್ಕ್ ಜಸ್ಟ್ ಮಿಸ್ ಆಗಿದ್ದಾರೆ. ಆದ್ರೆ ಈತನ ಸಹೋದರ ವಸಂತ್ ನಾಯ್ಕ್ ಕೊಲೆಯಾಗಿದ್ದಾನೆ. ಕಮಲಾಕರ್ ಭಟ್ ಅವರನ್ನ ಪೊಲೀಸರು ಬಂಧಿಸಿದ್ದಾರೆ.
ಜ್ಯೋತಿಷಿ ಕಮಲಾಕರ ಭಟ್ ಜತೆ ಅಕ್ರಮ ಸಂಬಂಧವಿರುವ ವಿಚಾರ ಮಗಳಿಗೆ ಗೊತ್ತಾಗಿತ್ತು. ಈ ವಿಚಾರವನ್ನು ತಂದೆ ಮಹೇಶ್ ನಾಯ್ಕ್ಗೆ ತಿಳಿಸಿದ್ದ ಮಗಳು, ಬಳಿಕ ಸಿದ್ದಾಪುರದ ಅವರಗುಪ್ಪ ಗ್ರಾಮದ ಚಿಕ್ಕಪ್ಪ ವಸಂತ್ ಮಗಳನ್ನು ಹುಡುಕಿಕೊಂಡು ಸುಚಿತ್ರಾ, ಜ್ಯೋತಿಷಿ ಕಮಲಾಕರ್ ಭಟ್ ವಾಹನದಲ್ಲಿ ತಂದೆ ಜತೆ ಕೆಲವು ಯುವಕರೊಂದಿಗೆ ವಸಂತ್ ನಾಯ್ಕ್ ಅವರ ಮನೆಗೆ ಬಂದಿದ್ದು, ಆಕೆಯ ಪತಿ ಮಹೇಶ್ ಕೂಡ ಇದ್ದರು.








