ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ( ರಿ.,) ಬೆಂಗಳೂರು ವಿಧಾನಸೌಧ ಮಾಧ್ಯಮದವರಿಗೆ ಪ್ರವೇಶ ನಿಬಂಧ- ರಾಜ್ಯ ಸಂಘ ಖಂಡನೆ ಮಾಧ್ಯಮದವರ ಮೇಲೆ ವಿಧಾನಸೌಧ ಪ್ರವೇಶಿಸಲು ನಿಷೇಧ ಹೇರುತ್ತಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಬ್ಬಾಳಿಕೆ.

19 Feb 2026
ರಾಜ್ಯ

ಆಡಳಿತ ಮತ್ತು ಸುಧಾರಣೆ ಇಲಾಖೆಯು ಭದ್ರತಾ ನೆಪವಡ್ಡಿ ಮಾಧ್ಯಮದವರ ಮೇಲೆ ವಿಧಾನಸೌಧ ಪ್ರವೇಶಿಸಲು ನಿಷೇಧ ಹೇರುತ್ತಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಬ್ಬಾಳಿಕೆ ಮಾಡಿದಂತಾಗಿದೆ. ಈ ಆದೇಶದ ನಿರ್ಧಾರವನ್ನು ಕರ್ನಾಟಕ ಮಾಧ್ಯಮ ಪತ್ರಕರ್ತ ಸಂಘವು ತೀವ್ರವಾಗಿ ಖಂಡಿಸುತ್ತಾ ,ಈ ಅದೇಶವನ್ನು ಹಿಂಪಡೇಬೇಕೆಂದು ಸರ್ಕಾರಕ್ಕೆ ಸಂಘ ಒತ್ತಾಯಿಸುತ್ತದೆ.

ಮಾಧ್ಯಮಗಳು ಇಲ್ಲದ ಜಗತ್ತು ಊಹಿಗೂ ನಿಲುಕದ್ದು , ಆರಂಭ ದಿನದಿಂದ ಅವು ನಡೆದು ಬಂದ ದಾರಿ ಒಂದು ರೋಚಕ ಇತಿಹಾಸ, ಬಗೆ ಬಗೆಯ ಸಂಕಷ್ಟಗಳು ಮತ್ತು ಅಡೆತಡೆಗಳ ನಡುವೆ ಜಗತ್ತಿನಲ್ಲಿ ಪತ್ರಿಕೋದ್ಯಮ ಉಳಿದಿರುವುದು ಕಾರಣ ಮಾನವನಿಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಬಗ್ಗೆ ಇರುವ ಅಪಾರ ಆಸಕ್ತಿಯಾಗಿದೆ.

ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ನಡವಳಿಕೆಗಳನ್ನು, ಚಟುವಟಿಕೆಗಳನ್ನು ಜನತೆಗೆ ಶೀಘ್ರವಾಗಿ ಮುಟ್ಟಿಸುವುದು, ಜನತೆಯ ಕುಂದು- ಕೊರತೆ ಆಶೋತ್ತರಗಳನ್ನು, ಅಧಿಕೃತವಾಗಿ ಆಡಳಿತ ವ್ಯವಸ್ಥೆಯ ಗಮನಕ್ಕೆ ತರುವುದು, ಜನತೆ ಹಾಗೂ ಪ್ರಜಾಪ್ರಭುತ್ವದ ಪ್ರಧಾನ ಅಂಗಗಳಿಗೆ ಎರಡು ಕಡೆ ಸಂಚಾರವಿರುವ ಸೇತುವೆಯಾಗಿ ಮಾಧ್ಯಮ ಕರ್ತವ್ಯ ನಿರ್ವಹಿಸುತ್ತಿದೆ.

ಸಮಾಜದ ಅಗೂ- ಹೋಗು, ಅಂಕು-ಡೊಂಕುಗಳನ್ನು ಮಾಧ್ಯಮ ಮೂಲಕ ತಿಳಿಸುವುದು ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳು ಕುಶತೊಡಗಿದಾಗ ಅವುಗಳನ್ನು ರಕ್ಷಿಸುವ ಹಾಗೂ ಆಡಳಿತ ಚುಕ್ಕಾಣಿ ಹಿಡಿದವರು ಎಡವಿದಾಗ ನಿರ್ಭಯದಿಂದ, ನಿರ್ಧಾಕ್ಷಿಣ್ಯವಾಗಿ ಎಚ್ಚರಿಸುವುದು ಮಾಧ್ಯಮದ ಜವಾಬ್ದಾರಿ ಅತ್ಯಂತ ಗುರುತರವಾದದ್ದು ಇಂತಹ ಜವಾಬ್ದಾರಿಯ ಹೊಣೆಗಾರಿಕೆಯನ್ನು ಹಲವು ದಶಕಗಳಿಂದಲೂ ನಡೆಸಿಕೊಂಡು ಬರುತ್ತಿದೆ.


ಮಾಧ್ಯಮದ ಮೇಲೆ ನಮ್ಮ ನಮ್ಮನಾಳುವಂತಹ ಸರ್ಕಾರಗಳು ಹಲವಾರು ನಿರ್ಬಂಧಗಳನ್ನು ವಿಧಿಸುತ್ತಿರುವುದು ಸರಿಯಾದ ಕ್ರಮವಲ್ಲ.

ಹಿಂದೆ ವಿಧಾನಸಭಾ ಕಲಾಪಗಳನ್ನು ನೇರ ಪ್ರಸಾರ ಮಾಡುತ್ತಿದ್ದ ಸಂದರ್ಭದಲ್ಲಿ ಚಿತ್ರೀಕರಣ ಮಾಡುವುದನ್ನು ಅಂದಿನ ಬಿಜೆಪಿ ಸರ್ಕಾರ ಚಿತ್ರೀಕರಣಕ್ಕೆ ತಡೆ ಮಾಡಿ ಮಾಧ್ಯಮದವರನ್ನು ಹೊರಗಿಡಲಾಯಿತು. ಇಂದು ಕೂಡ ಅದು ಮುಂದುವರಿಯುತ್ತಿದೆ.

ಇಂದು ಕಾಂಗ್ರೆಸ್ ಸರ್ಕಾರ ಮಾಧ್ಯಮದವರಿಗೆ ವಿಧಾನಸೌಧದಲ್ಲಿ ನಿಗದಿತ ಸ್ಥಳೀಯದಲ್ಲಿ ನಿಂತು ಸುದ್ದಿ ಮಾಡಬೇಕೆಂಬ ಆದೇಶ ಮಾಡಲು ಮುಂದಾಗಿ ಸಂಬಂಧ ಪಟ್ಟ ಇಲಾಖೆಗೆ ನಿಯಮವನ್ನು ಜಾರಿಗೆ ತರಲು ಮುಂದಾಗಿದ್ದು ಸರ್ಕಾರ ಕೂಡಲೇ ಆದೇಶವನ್ನು ಹಿಂಪಡೆಯಬೇಕು ಪತ್ರಕರ್ತರಿಗಿರುವ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಕೆಲಸವನ್ನು ಯಾವುದೇ ಸರ್ಕಾರ ಮಾಡೋದು ಸರಿಯಲ್ಲ.

ಕರ್ನಾಟಕ ಮಾಧ್ಯಮ ಪತ್ರಕರ್ತ ಸಂಘವು ಆದೇಶವನ್ನು ಖಂಡಿಸಿ, ಕೂಡಲೇ ವಾಪಸ್ ಪಡೆದು ಪತ್ರಕರ್ತರಿಗೆ ಮುಕ್ತವಾಗಿ ಕೆಲಸ ಮಾಡಲು ಅನುವು ಮಾಡಿಕೊಡಬೇಕೆಂದು ರಾಜ್ಯಾಧ್ಯಕ್ಷ ಜಿ.ಎಂ ರಾಜಶೇಖರ್ ಹಾಗೂ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.

Recently Updated:

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ
ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,
ದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರ
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.
ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ.. ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ..
ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ  ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ  ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.
ಸಾರಿಗೆ ನೌಕರರ ಮುಷ್ಕರ. ಕರ್ನಾಟಕ ಸಾರಿಗೆ ನೌಕರರು ತಮ್ಮ 38 ತಿಂಗಳ ಹಿಂಬಾಕಿಯನ್ನು ಮತ್ತು 2024 ರಿಂದ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಇಂದು ಬೆಂಗಳೂರು ಚಲೋ ನಡೆಸುತ್ತಿದ್ದಾರೆ. ಆದರೆ, ಬೆಂಗಳೂರು ಚಲೋಗೆ ರಾಜ್ಯದ ನಾನಾ ಭಾಗಗಳಿಂದ ಸಾರಿಗೆ ನೌಕರರು ಆಗಮಿಸಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜಮಾಯಸಾರಿಗೆ ನೌಕರರ ಮುಷ್ಕರ. ಕರ್ನಾಟಕ ಸಾರಿಗೆ ನೌಕರರು ತಮ್ಮ 38 ತಿಂಗಳ ಹಿಂಬಾಕಿಯನ್ನು ಮತ್ತು 2024 ರಿಂದ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಇಂದು ಬೆಂಗಳೂರು ಚಲೋ ನಡೆಸುತ್ತಿದ್ದಾರೆ. ಆದರೆ, ಬೆಂಗಳೂರು ಚಲೋಗೆ ರಾಜ್ಯದ ನಾನಾ ಭಾಗಗಳಿಂದ ಸಾರಿಗೆ ನೌಕರರು ಆಗಮಿಸಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜಮಾಯ
ಸಿದ್ದರಾಮಯ್ಯ  ಪಾಪರ್‌ ಮುಖ್ಯಮಂತ್ರಿಯಾಗಿದ್ದಾರೆ  ಸರ್ಕಾರ ದಿವಾಳಿಯಾಗಿದ್ದರೂ ಶಾಸಕರ ಫಾರಿನ್‌ ಟೂರ್‌. ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶಸಿದ್ದರಾಮಯ್ಯ ಪಾಪರ್‌ ಮುಖ್ಯಮಂತ್ರಿಯಾಗಿದ್ದಾರೆ ಸರ್ಕಾರ ದಿವಾಳಿಯಾಗಿದ್ದರೂ ಶಾಸಕರ ಫಾರಿನ್‌ ಟೂರ್‌. ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ
ಚಿಕ್ಕಮಗಳೂರಿನಲ್ಲಿ ಕೋಮು ಘರ್ಷಣೆ; ಇಡೀ ನಗರ ಬೂದಿ ಮುಚ್ಚಿದ ಕೆಂಡ. ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.!ಚಿಕ್ಕಮಗಳೂರಿನಲ್ಲಿ ಕೋಮು ಘರ್ಷಣೆ; ಇಡೀ ನಗರ ಬೂದಿ ಮುಚ್ಚಿದ ಕೆಂಡ. ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.!