ಸಾರಿಗೆ ನೌಕರರ ಮುಷ್ಕರ. ಕರ್ನಾಟಕ ಸಾರಿಗೆ ನೌಕರರು ತಮ್ಮ 38 ತಿಂಗಳ ಹಿಂಬಾಕಿಯನ್ನು ಮತ್ತು 2024 ರಿಂದ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಇಂದು ಬೆಂಗಳೂರು ಚಲೋ ನಡೆಸುತ್ತಿದ್ದಾರೆ. ಆದರೆ, ಬೆಂಗಳೂರು ಚಲೋಗೆ ರಾಜ್ಯದ ನಾನಾ ಭಾಗಗಳಿಂದ ಸಾರಿಗೆ ನೌಕರರು ಆಗಮಿಸಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜಮಾಯ

19 Feb 2026
ರಾಜ್ಯ

ಬೆಂಗಳೂರು:ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ ನೌಕರರು ಮೌನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಹಾಗೆಯೇ, ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿದ್ದಾರೆ. ಇಂದು ಸಂಜೆ 4 ಗಂಟೆಯವರೆಗೆ ತಮ್ಮ ಬೇಡಿಕೆ ಈಡೇರಿಕೆಯಾಗದಿದ್ದಲ್ಲಿ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ನೌಕರರ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.


ಆದರೆ, ಬೆಂಗಳೂರು ಸೇರಿದಂತೆ ರಾಜ್ಯದ ಇತರ ಕಡೆಗಳಲ್ಲಿ ಬಿಎಂಟಿಸಿ, ಕೆಎಸ್‌ಆರ್ ಟಿಸಿ ಮತ್ತು ಇತರ ನಿಗಮಗಳ ಬಸ್ ಸಂಚಾರ ಎಂದಿನಂತಿದ್ದು, ಪ್ರಯಾಣಿಕರಿಗೆ ಯಾವುದೇ ರೀತಿಯ ಸಮಸ್ಯೆಯಾಗಿರುವುದು ವರದಿಯಾಗಿಲ್ಲ.


26 ತಿಂಗಳ ಹಿಂಬಾಕಿ ನೀಡಲು ಸಿದ್ದ


ಇದರ ನಡುವೆಯೇ ರಾಜ್ಯ ಸರ್ಕಾರವು ನೌಕರರ 26 ತಿಂಗಳ ಹಿಂಬಾಕಿ ನೀಡಲು ಸಿದ್ದವಾಗಿದ್ದು, ಈ ಪ್ರಸ್ತಾವನೆಯನ್ನು ಸಾರಿಗೆ ನೌಕರರು ತಿರಸ್ಕರಿಸಿದ್ದು, ಶುಕ್ರವಾರದಿಂದ ಬಸ್ ಸಂಚಾರ ಸ್ಥಗಿತಗೊಳಿಸಿ ತೀವ್ರ ತರದ ಹೋರಾಟ ನಡೆಸಲು ಮುಂದಾಗಿದೆ.


ಇಂದು ಸಂಜೆಯವರೆಗೆ ರಾಜ್ಯ ಸರ್ಕಾರ ತಮ್ಮ ಎರಡೂ ಬೇಡಿಕೆಗಳ ಈಡೇರಿಕೆಯ ಬಗ್ಗೆ ತೀರ್ಮಾನ ಕೈಗೊಳ್ಳಬೇಕು, ಇಲ್ಲದಿದ್ದಲ್ಲಿ ಸಂಜೆ ಸಭೆ ನಡೆಸಿ ಮುಂದಿನ ಹೋರಾಟದ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.


ಆದರೆ, ಬೆಂಗಳೂರು ಸೇರಿದಂತೆ ರಾಜ್ಯದ ಇತರ ಕಡೆಗಳಲ್ಲಿ ಬಿಎಂಟಿಸಿ, ಕೆಎಸ್‌ಆರ್ ಟಿಸಿ ಮತ್ತು ಇತರ ನಿಗಮಗಳ ಬಸ್ ಸಂಚಾರ ಎಂದಿನಂತಿದ್ದು, ಪ್ರಯಾಣಿಕರಿಗೆ ಯಾವುದೇ ರೀತಿಯ ಸಮಸ್ಯೆಯಾಗಿರುವುದು ವರದಿಯಾಗಿಲ್ಲ.


26 ತಿಂಗಳ ಹಿಂಬಾಕಿ ನೀಡಲು ಸಿದ್ದ


ಇದರ ನಡುವೆಯೇ ರಾಜ್ಯ ಸರ್ಕಾರವು ನೌಕರರ 26 ತಿಂಗಳ ಹಿಂಬಾಕಿ ನೀಡಲು ಸಿದ್ದವಾಗಿದ್ದು, ಈ ಪ್ರಸ್ತಾವನೆಯನ್ನು ಸಾರಿಗೆ ನೌಕರರು ತಿರಸ್ಕರಿಸಿದ್ದು, ಶುಕ್ರವಾರದಿಂದ ಬಸ್ ಸಂಚಾರ ಸ್ಥಗಿತಗೊಳಿಸಿ ತೀವ್ರ ತರದ ಹೋರಾಟ ನಡೆಸಲು ಮುಂದಾಗಿದೆ.


ಇಂದು ಸಂಜೆಯವರೆಗೆ ರಾಜ್ಯ ಸರ್ಕಾರ ತಮ್ಮ ಎರಡೂ ಬೇಡಿಕೆಗಳ ಈಡೇರಿಕೆಯ ಬಗ್ಗೆ ತೀರ್ಮಾನ ಕೈಗೊಳ್ಳಬೇಕು, ಇಲ್ಲದಿದ್ದಲ್ಲಿ ಸಂಜೆ ಸಭೆ ನಡೆಸಿ ಮುಂದಿನ ಹೋರಾಟದ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.


ಈ ಹಿನ್ನೆಲೆಯಲ್ಲಿ ಶುಕ್ರವಾರದಿಂದ ರಾಜ್ಯಾದಾದ್ಯಂತ ಬಸ್ ಸಂಚಾರ ಸ್ಥಗಿತಗೊಳಿಸಿ ತಮ್ಮ ಹೋರಾಟವನ್ನು ತೀವ್ರತರವಾಗಿ ನಡೆಸಲು ಸಾರಿಗೆ ನೌಕರರು ಸಜ್ಜಾಗಿದ್ದಾರೆ ಎನ್ನಲಾಗಿದೆ. ಇದರಿಂದ ರಾಜ್ಯ ಸರ್ಕಾರ ಮತ್ತು ಸಾರಿಗೆ ನೌಕರರ ನಡುವಿನ ಬಿಕ್ಕಟ್ಟು ಮುಂದುವರೆದಿದ್ದು, ಲಕ್ಷಾಂತರ ಪ್ರಯಾಣಿಕರು ಪರದಾಡುವ ಸಾಧ್ಯತೆಗಳಿವೆ.


ಸಾರಿಗೆ ನೌಕರರು ತಮ್ಮ 38 ತಿಂಗಳ ವೇತನ ಹಿಂಬಾಕಿ ಬಿಡುಗಡೆ ಮಾಡಲು ಒತ್ತಾಯಿಸುತ್ತಿದೆ. ಆದರೆ, ರಾಜ್ಯ ಸರ್ಕಾರ ಪ್ರಸ್ತುತ ಇರುವ ಸಂಪನ್ಮೂಲದ ಆಧಾರದ ಮೇಲೆ 26 ತಿಂಗಳ ಹಿಂಬಾಕಿ ನೀಡಲು ಮುಂದಾಗಿದೆ. ಆದರೆ, ಇದನ್ನು ನೌಕರರು ತಿರಸ್ಕರಿಸಿದ್ದು, ಸಂಪೂರ್ಣ ಹಿಂಬಾಕಿ ನೀಡಬೇಕೆಂದು ಆಗ್ರಹಿಸಿದ್ದಾರೆ.


ನಾಳೆಯಿಂದ ಬಸ್ ಸಂಚಾರ ಸ್ಥಗಿತ ಸಾಧ್ಯತೆ !


ಇಂದು ಸಂಜೆಯವರೆಗೆ ರಾಜ್ಯ ಸರ್ಕಾರಕ್ಕೆ ಸಾರಿಗೆ ನೌಕರರು ಗಡುವು ನೀಡಿದೆ. ಆದರೆ, ಅದರೊಳಗೆ ರಾಜ್ಯ ಸರ್ಕಾರ ನೌಕರರ ಸಮಸ್ಯೆಗೆ ಸ್ಪಂದಿಸುವ ಸಾಧ್ಯತೆಗಳು ತೀರಾ ವಿರಳವಾಗಿದೆ. ಆದ್ದರಿಂದ ನಾಳೆಯಿಂದ ರಾಜ್ಯದಲ್ಲಿ ಬಸ್ ಸಂಚಾರ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ಮುಂದಾಗುವ ಸಾಧ್ಯತೆಗಳು ಹೆಚ್ಚಾಗಿವೆ.


ನಾವು ಕಷ್ಟದಲ್ಲಿ ದುಡಿಯುವ ವರ್ಗ, ನಮ್ಮ ದುಡಿಮೆಗೆ ತಕ್ಕ ಪ್ರತಿಫಲವನ್ನು ಕೇಳುತ್ತಿದ್ದೇವೆ. ಈ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಜಂಟಿ ಕ್ರಿಯಾ ಸಮಿತಿ ನಾಯಕರು ಸ್ಪಷ್ಟಪಡಿಸಿದ್ದಾರೆ.


ಈ ಕುರಿತು ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, 26 ತಿಂಗಳ ಹಿಂಬಾಕಿ ನೀಡಲು ನಿರ್ಧರಿಸಲಾಗಿದೆ. ನೌಕರರು ಇದರಿಂದ ಸಂತೋಷಪಡಬೇಕು ಮತ್ತು ಸರ್ಕಾರದ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. 38 ತಿಂಗಳು ಕೇಳಿದ್ದರು, 26 ತಿಂಗಳು ಕೊಟ್ಟಿದ್ದೇವೆ. ಸದ್ಯ ಅಷ್ಟು ಕೊಟ್ಟಿದ್ದಾರಲ್ಲ ಎಂದು ಸಂತೋಷಪಡಬೇಕು. ಸರ್ಕಾರದ ಪರಿಸ್ಥಿತಿ ಅರ್ಥಮಾಡಿಕೊಳ್ಳಿ. ದಯವಿಟ್ಟು ಸಾರಿಗೆ ನೌಕರರೆಲ್ಲ ಸಹಕಾರ ಮಾಡಬೇಕು ಎಂದು ನಾನು ಮನವಿ ಮಾಡುತ್ತೇನೆ ಎಂದು ಹೇಳಿದ್ದರು.


ಆದರೆ, ಸಾರಿಗೆ ನೌಕರರ ಸಂಘವು ಸರ್ಕಾರದ ಈ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದು, ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ಮುಂದುವರಿಸಲು ನಿರ್ಧರಿಸಿದೆ. ಇಂದಿನ ಸಂಜೆ ಸಭೆಯ ನಂತರ ಬಸ್ ಸಂಚಾರದ ಭವಿಷ್ಯ ನಿರ್ಧಾರವಾಗಲಿದೆ.

ಸಾರಿಗೆ ನೌಕರರು ಇಂದು ಬೆಂಗಳೂರು ಚಲೋ ಮುಷ್ಕರ ನಡೆಸುತ್ತಿದ್ದಾರೆ. ಆದರೆ, ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಭಾಗಗಳಲ್ಲಿ ಯಾವುದೇ ರೀತಿಯಲ್ಲಿ ಬಸ್ ಸಂಚಾರ ಸ್ಥಗಿತವಾಗಿರುವುದರ ಬಗ್ಗೆ ವರದಿಯಾಗಿಲ್ಲ, ಎಂದಿನಂತೆ ಬಸ್ ಸಂಚಾರವಿದ್ದು, ಅನಾಕೂಲಗಳು ಆಗಿಲ್ಲ.

Recently Updated:

ಕುಂದಾಪುರದಲ್ಲಿ  ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ  ವೈದ್ಯನ ಅಟ್ಟಹಾಸ.!   ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..ಕುಂದಾಪುರದಲ್ಲಿ ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ ವೈದ್ಯನ ಅಟ್ಟಹಾಸ.! ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..
ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..
ಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್  ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!!  ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್ ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!! ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯ
ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗ
ಧರ್ಮದ ಹೊಲದಲ್ಲಿ ಭತ್ತದ ಫಸಲು  ಅನ್ನವೂ ಧರ್ಮ ನೆಲವೂ ಧರ್ಮ’  ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ   ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..ಧರ್ಮದ ಹೊಲದಲ್ಲಿ ಭತ್ತದ ಫಸಲು ಅನ್ನವೂ ಧರ್ಮ ನೆಲವೂ ಧರ್ಮ’ ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ  ಉಡುಪಿ ಪ್ರಥಮ ಸ್ಥಾನ  ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಉಡುಪಿ ಪ್ರಥಮ ಸ್ಥಾನ ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.
ಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ  ಬಿಜೆಪಿಯ ರಾಜ್ಯ  ಮೋರ್ಚಾ ಉಪಾಧ್ಯಕ್ಷರು.  ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ ಬಿಜೆಪಿಯ ರಾಜ್ಯ ಮೋರ್ಚಾ ಉಪಾಧ್ಯಕ್ಷರು. ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ