ಧರ್ಮದ ಹೊಲದಲ್ಲಿ ಭತ್ತದ ಫಸಲು ಅನ್ನವೂ ಧರ್ಮ ನೆಲವೂ ಧರ್ಮ’ ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..

22 May 2026
ರಾಜ್ಯ

ಗಂಗಾವತಿ:ತುಂಗಭದ್ರಾ ನದಿಯ ಕೃಪೆಯಿಂದ 'ಭತ್ತದ ನಾಡು' ಎಂದು ಹೆಸರಾದ ಹಾಗೂ ಶ್ರೀರಾಮನ ಬಂಟ ಶ್ರೀ ಆಂಜನೇಯನ ಜನ್ಮಸ್ಥಳವಾದ ಕಿಷ್ಕಿಂಧಾ ಪ್ರದೇಶದ ಮಹಿಮೆಯಿಂದ ಗಂಗಾವತಿಯು ಧರ್ಮದ ನೆಲೆಬೀಡಾಗಿ ಕಂಗೊಳಿಸುತ್ತಿದೆ ಎಂದು ಶುಕ್ಲ ಯಜುರ್ವೇದಿಗಳ ಶ್ರೀಮದ್ ಕಣ್ವ ಮಠಾಧೀಶರಾದ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು.


ಧರ್ಮ ಜಾಗೃತಿಗಾಗಿ ಕಮಲಾಪುರಕ್ಕೆ ಆಗಮಿಸಿ, ಅಲ್ಲಿಂದ ಹುಣಸಿಹೊಳೆ ಕಣ್ವ ಪೀಠಕ್ಕೆ ತೆರಳುವ ಮಾರ್ಗಮಧ್ಯದಲ್ಲಿ ಗಂಗಾವತಿಯ ಶ್ರೀ ಯೋಗೇಶ್ವರ ಯಾಜ್ಞವಲ್ಕ್ಯ ಮಂದಿರಕ್ಕೆ ಭೇಟಿ ನೀಡಿದ್ದ ಪೂಜ್ಯರು ಭಕ್ತರನ್ನು ಆಶೀರ್ವದಿಸಿ ಮಾತನಾಡಿದರು. ಧರ್ಮ, ಧಾರ್ಮಿಕ ಆಚರಣೆ ಹಾಗೂ ಸಂಸ್ಕಾರಗಳನ್ನು ಉಳಿಸಿ ಬೆಳೆಸುವಲ್ಲಿ ಗಂಗಾವತಿಯ ಸೇವಾ ಸಮಿತಿಯವರು ಶ್ರಮಿಸುತ್ತಿರುವುದನ್ನು ಅವರು ಮುಕ್ತಕಂಠದಿಂದ ಪ್ರಶಂಸಿಸಿದರು. ಅಧಿಕಮಾಸದ ಪ್ರಯುಕ್ತ 33 ದಿನಗಳ ಕಾಲ ರಾಜ್ಯದ ನಾನಾ ಭಾಗಗಳ ವಿದ್ವಾಂಸರನ್ನು ಆಹ್ವಾನಿಸಿ, 'ಜ್ಞಾನಸತ್ರ'ದ ಅಡಿಯಲ್ಲಿ ಪ್ರವಚನಗಳನ್ನು ಹಮ್ಮಿಕೊಂಡಿರುವುದು ಇಲ್ಲಿನ ಭಕ್ತರ ಧಾರ್ಮಿಕ ಮನೋಭಾವನೆಗೆ ಸಾಕ್ಷಿಯಾಗಿದೆ ಎಂದರು.


ಇದೇ ಹಿನ್ನೆಲೆಯಲ್ಲಿ ತಾವು ದಿನಾಂಕ 13 ರಿಂದ 15 ರವರೆಗೆ ಮೂರು ದಿನಗಳ ಕಾಲ ಇಲ್ಲಿಯೇ ವಾಸ್ತವ್ಯ ಹೂಡಲಿದ್ದು, ತೊಟ್ಟಿಲು ಪೂಜೆ, ಪುರುಷೋತ್ತಮ ಯಾಗ, ತಪ್ತಮುದ್ರಾ ಧಾರಣೆ ಹಾಗೂ ಪಾದಪೂಜೆಯಂತಹ ಧಾರ್ಮಿಕ ಆಚರಣೆಗಳಲ್ಲಿ ಪಾಲ್ಗೊಳ್ಳುವುದಾಗಿ ಶ್ರೀಗಳು ತಿಳಿಸಿದರು.


ಇದಕ್ಕೂ ಮುನ್ನ ಮಂದಿರಕ್ಕೆ ಆಗಮಿಸಿದ ಪೂಜ್ಯರನ್ನು ಸೇವಾ ಸಮಿತಿಯ ಅಧ್ಯಕ್ಷರಾದ ಮುರಳಿಧರ್ ಗಂಗನಾಳ, ಪವನ್ ಜೋಶಿ, ರಾಘವೇಂದ್ರ ಮೇಗೂರು, ಸತೀಶ್ ಶೇಷಗಿರಿ ಕುಲಕರ್ಣಿ, ಗುರುರಾಜ ಚರ್ಚಿನಗುಡ್ಡ, ಆನಂದ್, ಮಣಿ, ಶ್ರೀನಿವಾಸ್ ಕುಲಕರ್ಣಿ, ರಾಮಕೃಷ್ಣ ಆಚಾರ್, ತಿರುಮಲರಾವ್ ಆಲಂಪಲ್ಲಿ, ರಾಘವೇಂದ್ರ ಲೆಕ್ಕಿಹಾಳ, ರಂಗನಾಥ್ ವಟಗಲ್, ಪ್ರಹ್ಲಾದ್ ಕೋಮಲಾಪುರ ಸೇರಿದಂತೆ ಅಪಾರ ಭಕ್ತಾದಿಗಳು ಪೂರ್ಣಕುಂಭದೊಂದಿಗೆ ಭಕ್ತಿಯಿಂದ ಬರಮಾಡಿಕೊಂಡರು.

Recently Updated:

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ  ಉಡುಪಿ ಪ್ರಥಮ ಸ್ಥಾನ  ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಉಡುಪಿ ಪ್ರಥಮ ಸ್ಥಾನ ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.
ಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ  ಬಿಜೆಪಿಯ ರಾಜ್ಯ  ಮೋರ್ಚಾ ಉಪಾಧ್ಯಕ್ಷರು.  ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ ಬಿಜೆಪಿಯ ರಾಜ್ಯ ಮೋರ್ಚಾ ಉಪಾಧ್ಯಕ್ಷರು. ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ
ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,
ದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರ
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.
ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ.. ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ..
ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ  ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ  ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ( ರಿ.,) ಬೆಂಗಳೂರು    ವಿಧಾನಸೌಧ ಮಾಧ್ಯಮದವರಿಗೆ ಪ್ರವೇಶ ನಿಬಂಧ-  ರಾಜ್ಯ ಸಂಘ ಖಂಡನೆ ಮಾಧ್ಯಮದವರ ಮೇಲೆ ವಿಧಾನಸೌಧ ಪ್ರವೇಶಿಸಲು ನಿಷೇಧ ಹೇರುತ್ತಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಬ್ಬಾಳಿಕೆ.ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ( ರಿ.,) ಬೆಂಗಳೂರು ವಿಧಾನಸೌಧ ಮಾಧ್ಯಮದವರಿಗೆ ಪ್ರವೇಶ ನಿಬಂಧ- ರಾಜ್ಯ ಸಂಘ ಖಂಡನೆ ಮಾಧ್ಯಮದವರ ಮೇಲೆ ವಿಧಾನಸೌಧ ಪ್ರವೇಶಿಸಲು ನಿಷೇಧ ಹೇರುತ್ತಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಬ್ಬಾಳಿಕೆ.