ಬಂಟ್ವಾಳ KSRTC ಬಸ್. ನಿಲ್ದಾಣದಲ್ಲೇ ಯುವತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿ.. ಹಾಡಹಗಲೇ ಬಂಟ್ವಾಳದಲ್ಲಿ ಭೀಕರ ಕೃತ್ಯ ಯುವತಿಯ ಅಮಾನುಷ ಹತ್ಯೆ!

16 Jul 2026
ಕರಾವಳಿ

ಜನನಿಬಿಡ ಪ್ರದೇಶದಲ್ಲೇ ಯುವತಿ ಒಬ್ಬಳನ್ನು ಚೂರಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ

ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಹಾಡಹಗಲೇ ಎಲ್ಲರ ಕಣ್ಣೆದುರೇ ಯುವತಿಯೊಬ್ಬಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕ್ರೂರವಾಗಿ ಕೊಲೆ ಮಾಡಲಾಗಿದೆ.

ಕಕ್ಕಪದವು ನಿವಾಸಿ ಲಾವಣ್ಯ ಎಂದು ಗುರುತಿಸಲಾಗಿದೆ. ಇವರು ಕಲ್ಲಡ್ಕದ ಖಾಸಗಿ ನರ್ಸಿಂಗ್ ಹೋಮ್ ಒಂದರಲ್ಲಿ ಉದ್ಯೋಗಿಯಾಗಿದ್ದರು.

ನಡೆದಿದ್ದೇನು?

, ಲಾವಣ್ಯ ಅವರು ಕಕ್ಕಪದವು ಕಡೆಗೆ ತೆರಳಲು ಕೆಎಸ್ಆರ್‌ಟಿಸಿ ಬಸ್‌ನಲ್ಲಿ ಕುಳಿತಿದ್ದರು. ಈ ವೇಳೆ ತನ್ನ ಪಕ್ಕದಲ್ಲೇ ಕುಳಿತಿದ್ದ ಯುವಕನ ಬಗ್ಗೆ ಆತಂಕಗೊಂಡು, ತಕ್ಷಣವೇ ತಮ್ಮ ಸಂಬಂಧಿಕರೊಬ್ಬರಿಗೆ ದೂರವಾಣಿ ಕರೆ ಮಾಡಿ, "ನನ್ನ ಪಕ್ಕದಲ್ಲಿ ಓರ್ವ ಯುವಕ ಕುಳಿತಿದ್ದಾನೆ" ಎಂದು ಭಯದಿಂದಲೇ ತಿಳಿಸಿದ್ದರು.

ಆತಂಕಗೊಂಡ ಯುವತಿ ತಕ್ಷಣವೇ ಬಸ್‌ನಿಂದ ಕೆಳಗಿಳಿದಿದ್ದಾರೆ. ಆದರೆ, ಅವಳನ್ನೇ ಬೆನ್ನಟ್ಟಿಕೊಂಡು ಬಂದ ಆ ನರಾಧಮ, ತಾನು ಬ್ಯಾಗ್‌ನಲ್ಲಿ ಬಚ್ಚಿಟ್ಟುಕೊಂಡಿದ್ದ ಹರಿತವಾದ ಮಾರಕಾಸ್ತ್ರವನ್ನು ಹೊರಗೆಳೆದಿದ್ದಾನೆ. ಇದನ್ನು ಕಂಡು ದಿಕ್ಕೆಟ್ಟ ಯುವತಿ ಪ್ರಾಣಭಯದಿಂದ ಓಡಿ ತಪ್ಪಿಸಿಕೊಳ್ಳಲು ಯತ್ನಿಸಿದರೂ, ಎಲ್ಲರ ಸಮ್ಮುಖದಲ್ಲೇ ಆಕೆಯ ಮೇಲೆ ಹಿಂಸಾತ್ಮಕವಾಗಿ ಮಾರಕ ದಾಳಿ ನಡೆಸಲಾಗಿದೆ. ತೀವ್ರವಾಗಿ ಗಾಯಗೊಂಡ ಯುವತಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಆರೋಪಿ ಕೃತ್ಯ ಎಸಗಿದ ತಕ್ಷಣ ಸ್ಥಳದಿಂದ ಪರಾರಿಯಾಗಿದ್ದಾನೆ.

ಸ್ಥಳದಲ್ಲಿ ಆತಂಕದ ವಾತಾವರಣ

ಜನರು ತುಂಬಿದ್ದ ಬಸ್ ನಿಲ್ದಾಣದಲ್ಲೇ ಇಂತಹ ಭೀಕರ ದುಷ್ಕೃತ್ಯ ನಡೆದಿದ್ದರಿಂದ ಕೆಲಕಾಲ ಸಾರ್ವಜನಿಕರಲ್ಲಿ ತೀವ್ರ ಆತಂಕ ಹಾಗೂ ಆಕ್ರೋಶದ ವಾತಾವರಣ ನಿರ್ಮಾಣವಾಗಿತ್ತು. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಬಂಟ್ವಾಳ ಉಪವಿಭಾಗದ ಪೊಲೀಸ್ ಅಧಿಕಾರಿಗಳು, ನಗರ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯ ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.

ಹಾಡಹಗಲಲ್ಲೇ ಸಾರ್ವಜನಿಕರ ಎದುರೇ ಯುವತಿಯೊಬ್ಬಳನ್ನು ಇಷ್ಟು ಕ್ರೂರವಾಗಿ ಹತ್ಯೆ ಮಾಡಿರುವುದು ಸಮಾಜ ತಲೆತಗ್ಗಿಸುವಂತೆ ಮಾಡಿದ್ದು, ನಾಗರಿಕ ವಲಯದಲ್ಲಿ ತೀವ್ರ ಆಘಾತವನ್ನುಂಟು ಮಾಡಿದೆ.

Recently Updated:

ಕುಂದಾಪುರ ಹೆಸರಿಗೆ ತಾಲೂಕು ಕೇಂದ್ರ, ರೈಲ್ವೆ ಸ್ಟೇಷನ್‌ಗೆ ಮಾತ್ರ ಸಾರಿಗೆ ವ್ಯವಸ್ಥೆ ಇಲ್ಲ   ರೈಲ್ವೆ  ಸ್ಟೇಷನ್‌ಗೆ    ರೈಲು ಬರುತ್ತೆ, ಬಸ್ ಬರಲ್ಲ ಪ್ರಯಾಣಿಕರ ನಿತ್ಯದ ಗೋಳು...ಕುಂದಾಪುರ ಹೆಸರಿಗೆ ತಾಲೂಕು ಕೇಂದ್ರ, ರೈಲ್ವೆ ಸ್ಟೇಷನ್‌ಗೆ ಮಾತ್ರ ಸಾರಿಗೆ ವ್ಯವಸ್ಥೆ ಇಲ್ಲ ರೈಲ್ವೆ ಸ್ಟೇಷನ್‌ಗೆ ರೈಲು ಬರುತ್ತೆ, ಬಸ್ ಬರಲ್ಲ ಪ್ರಯಾಣಿಕರ ನಿತ್ಯದ ಗೋಳು...
ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಿಂದ ಗ್ರಾಮಗಳ ಸಮಗ್ರ ಪ್ರಗತಿಗೆ ವೇಗ : ಯಶ್ ಪಾಲ್ ಸುವರ್ಣ.ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಿಂದ ಗ್ರಾಮಗಳ ಸಮಗ್ರ ಪ್ರಗತಿಗೆ ವೇಗ : ಯಶ್ ಪಾಲ್ ಸುವರ್ಣ.
ಅಂತರ್ ಜಿಲ್ಲಾ ಭಜನಾ ಸ್ಪರ್ಧೆಯ ಅಂಗವಾಗಿ  ಶ್ರೀ ವಡಭಾಂಡೇಶ್ವರ ಬಲರಾಮ ದೇವತಾನದಿಂದ ಆನಂದ ಶರಧಿಗೆ ಭವ್ಯ ದೀಪದ ಶೋಭಾಯಾತ್ರೆ. ಅಂತರ್ ಜಿಲ್ಲಾ ಭಜನಾ ಸ್ಪರ್ಧೆಯ ಅಂಗವಾಗಿ ಶ್ರೀ ವಡಭಾಂಡೇಶ್ವರ ಬಲರಾಮ ದೇವತಾನದಿಂದ ಆನಂದ ಶರಧಿಗೆ ಭವ್ಯ ದೀಪದ ಶೋಭಾಯಾತ್ರೆ.
ಕತ್ತಲಲ್ಲಿ ಕಲ್ಮಶ: ಕರಾವಳಿಯ ಕಣ್ಣೀರ ಕಥೆ"* ಕಪ್ಪು, ಕೆಂಪು, ರಾಸಾಯನಿಕ ವಾಸನೆಯ ನೀರನ್ನು ನೇರವಾಗಿ ಅರಬ್ಬಿ ಸಮುದ್ರಕ್ಕೆ ಸುರಿಯುತ್ತಿವೆ.!!ಕತ್ತಲಲ್ಲಿ ಕಲ್ಮಶ: ಕರಾವಳಿಯ ಕಣ್ಣೀರ ಕಥೆ"* ಕಪ್ಪು, ಕೆಂಪು, ರಾಸಾಯನಿಕ ವಾಸನೆಯ ನೀರನ್ನು ನೇರವಾಗಿ ಅರಬ್ಬಿ ಸಮುದ್ರಕ್ಕೆ ಸುರಿಯುತ್ತಿವೆ.!!
ಕಾರ್ಕಳ: ಪೊಲೀಸರ ಮೇಲೆ ಕಾರು ಹರಿಸಲು ಯತ್ನಿಸಿದ ಐವರು ಕ್ರಿಕೆಟ್ ಬೆಟ್ಟಿಂಗ್ ಬುಕ್ಕಿಗಳ ಬಂಧನಕಾರ್ಕಳ: ಪೊಲೀಸರ ಮೇಲೆ ಕಾರು ಹರಿಸಲು ಯತ್ನಿಸಿದ ಐವರು ಕ್ರಿಕೆಟ್ ಬೆಟ್ಟಿಂಗ್ ಬುಕ್ಕಿಗಳ ಬಂಧನ
ಕೋಟ ಆನಂದ್ ಕುಂದರ್ ಮಾಲೀಕತ್ವದ ಜನತಾ ಫಿಶ್ ಮೀಲ್ ಕಾರ್ಮಿಕರಿಂದ  ತನ್ನ ಸಾಮಾಜಿಕ ಜವಾಬ್ದಾರಿಯ ಅಡಿಯಲ್ಲಿ, 'ಸ್ವಚ್ಛ ಭಾರತ' ಅಭಿಯಾನಕ್ಕೆ ಭಾರಿ ಬೆಂಬಲ ನೀಡುತ್ತಿದೆ...ಕೋಟ ಆನಂದ್ ಕುಂದರ್ ಮಾಲೀಕತ್ವದ ಜನತಾ ಫಿಶ್ ಮೀಲ್ ಕಾರ್ಮಿಕರಿಂದ ತನ್ನ ಸಾಮಾಜಿಕ ಜವಾಬ್ದಾರಿಯ ಅಡಿಯಲ್ಲಿ, 'ಸ್ವಚ್ಛ ಭಾರತ' ಅಭಿಯಾನಕ್ಕೆ ಭಾರಿ ಬೆಂಬಲ ನೀಡುತ್ತಿದೆ...
ನಿರ್ದಿಷ್ಟ ಸಮಯದಲ್ಲಿ, ಸಾಂದರ್ಭಿಕವಾಗಿ ಆರೋಗ್ಯ ತಪಾಸಣೆ ಅವಶ್ಯ - ಸುನಿಲ್‌ ಕುಮಾರ್‌.ನಿರ್ದಿಷ್ಟ ಸಮಯದಲ್ಲಿ, ಸಾಂದರ್ಭಿಕವಾಗಿ ಆರೋಗ್ಯ ತಪಾಸಣೆ ಅವಶ್ಯ - ಸುನಿಲ್‌ ಕುಮಾರ್‌.
ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧದ ಲೈಂಗಿಕ ಕಿರುಕುಳದ ಆರೋಪಗಳು ಸುಳ್ಳು ಮತ್ತು ದುರುದ್ದೇಶಪೂರಿತ ಎಂದು ಮಂಗಳೂರು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಲೈಂಗಿಕ ದೌರ್ಜನ್ಯದ ಆರೋಪಗಳಿಗೆ ಪುರಾವೆ ದೊರೆತಿಲ್ಲ.ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧದ ಲೈಂಗಿಕ ಕಿರುಕುಳದ ಆರೋಪಗಳು ಸುಳ್ಳು ಮತ್ತು ದುರುದ್ದೇಶಪೂರಿತ ಎಂದು ಮಂಗಳೂರು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಲೈಂಗಿಕ ದೌರ್ಜನ್ಯದ ಆರೋಪಗಳಿಗೆ ಪುರಾವೆ ದೊರೆತಿಲ್ಲ.
ಮಂಗಳೂರು: ಗೃಹಮಿಂಗ್ ವಿಧಾನ ಬಳಸಿ ಆರೋಪಿ 9 ವರ್ಷದ  ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ  ವಿಕೃತಕಾಮಿಯ ಬಂಧನ.ಮಂಗಳೂರು: ಗೃಹಮಿಂಗ್ ವಿಧಾನ ಬಳಸಿ ಆರೋಪಿ 9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವಿಕೃತಕಾಮಿಯ ಬಂಧನ.