ಇದರಿಂದ ಮತ್ತೊಬ್ಬ ಲಿಂಗಾಯತ ಮುಖಂಡ ಸಚಿವರಾಗಿ ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಇನ್ನೊಂದೆಡೆ ವಿಧಾನ ಪರಿಷತ್ ಸದಸ್ಯೆ ಗಾಯಿತ್ರಿ ಅವರ ಬದಲಾಗಿ ಉಮಾಶ್ರೀ ಅವರನ್ನು ಸಚಿವರನ್ನಾಗಿ ಆಯ್ಕೆ ಮಾಡಬೇಕೆಂಬ ಒತ್ತಡ ಹೆಚ್ಚಾಗುತ್ತಿದೆ. ವರಿಷ್ಠರು ಇದಕ್ಕೆ ಒಪ್ಪುತ್ತಾರಾ ಎನ್ನುವುದನ್ನು ಕಾದುನೋಡಬೇಕಾಗಿದೆ.
ತನ್ವೀರ್ ಸೇಠ್ ಆಕ್ರೋಶ
ಸಿಎಂ ಡಿಕೆ ಶಿವಕುಮಾರ್ ಅವರ ಕ್ಯಾಬಿನೆಟ್ ನಲ್ಲಿ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಮೈಸೂರು ಭಾಗದ ಹಿರಿಯ ಮುಖಂಡ ಮತ್ತು ಶಾಸಕ ತನ್ವೀರ್ ಸೇಠ್, ನನ್ನ ಮುಂದಿನ ನಡೆ ಕಾರ್ಯಕರ್ತರ ತೀರ್ಮಾನಕ್ಕೆ ಬದ್ದ ಎಂದಿದ್ದಾರೆ.
ನಾನು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದೇ, ಆದರೆ, ಹೈಕಮಾಂಡ್ ನೀಡಿದ್ದ ಭರವಸೆ ಹುಸಿಯಾಗಿದೆ. ನಾನು ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿ ನನ್ನ ಮುಂದಿನ ನಿರ್ಧಾರವನ್ನು ಪ್ರಕಟಿಸಲಾಗುವುದು ಎಂದು ತನ್ವೀರ್ ಸೇಠ್ ಮೈಸೂರಿನಲ್ಲಿ ತಿಳಿಸಿದ್ದಾರೆ.
ಸಚಿವ ಸ್ಥಾನ ಸಿಗಲಿದೆ ಎಂದು ಕಾಯುತ್ತಿದ್ದ ನಾಯಕರಿಗೆ ನಿರಾಸೆ; ಕೊನೆ ಕ್ಷಣದಲ್ಲಿ ಬದಲಾದ ಲೆಕ್ಕಾಚಾರ, ಡಿಕೆಶಿ ಸಂಪುಟದಲ್ಲಿ ಯಾರಿಗೆ ಶಾಕ್?
ನಾನು ಯಾರ ವಿರುದ್ದವೂ ವೈಯಕ್ತಿಕವಾಗಿ ಮಾತನಾಡುವುದಿಲ್ಲ, ಅದಕ್ಕೂ ಒಂದು ಕಾಲ ಬರುತ್ತದೆ. ನನ್ನ ಕೋಪ, ನೋವು ಮತ್ತು ಬೇಸರವನ್ನು ಯಾವುದೇ ಪದಗಳಲ್ಲಿ ವ್ಯಕ್ತಪಡಿಸದೆ ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿಯಾಗಿ ಕೆಲಸ ಮಾಡಿಕೊಂಡಿದ್ದೇನೆ. ಈಗಲೂ ಬೇಸರದಲ್ಲಿ ಯಾರ ವಿರುದ್ದವೂ ನಾನು ಮಾತನಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ನನಗೆ ಯಾವುದೇ ರೀತಿಯ ನಿಗಮ ಮಂಡಳಿ ಸ್ಥಾನವೂ ಬೇಡ ಎಂದು ಈ ಹಿಂದೆಯೂ ಹೇಳಿದ್ದೆ, ಈಗಲೂ ನನಗೆ ನಿಗಮ ಮಂಡಳಿ ಸ್ಥಾನ ಬೇಡ, ದೆಹಲಿಗೆ ಹೋಗಿ ಲಾಬಿ ಮಾಡಲ್ಲ, ಈಗಲೂ ಮಾಡಲ್ಲ, ನನಗೆ ಯಾರಿಂದ ಸಚಿವ ಸ್ಥಾನ ತಪ್ಪಿಗೆ ಎನ್ನುವುದನ್ನು ಮುಂದಿನ ದಿನಗಳಲ್ಲಿ ಬಹಿರಂಗಪಡಿಸುತ್ತೇನೆ ಎಂದು ಹೇಳಿದ್ದಾರೆ.
ಆಕಾಂಕ್ಷಿತ ಶಾಸಕರ ಬೆಂಬಲಿಗರಿಂದ ಭುಗಿಲೆದ್ದ ಆಕ್ರೋಶ
ಸಚಿವ ಸ್ಥಾನ ದೊರೆಯದೇ ಇದ್ದ ಕಾರಣ ಗೋವಿಂದರಾಜ ನಗರದ ಶಾಸಕ ಪ್ರಿಯಾ ಕೃಷ್ಣ ಅವರ ಬೆಂಬಲಿಗರು ಆಕ್ರೋಶ ವ್ಯಕ್ತಪಿಸಿದ್ದಾರೆ. ಪ್ರತಿಭಟನೆ ನಡೆಸಿದ ಪ್ರಿಯಾ ಕೃಷ್ಣ ಅವರ ಬೆಂಬಲಿಗರು, ರಾಜ್ಯಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
ವಿಜಯಪುರದಲ್ಲಿ ಮತ್ತೊಂದು ಸ್ಥಾನ ಸಿಗಬೇಕಿತ್ತು ಎಂಬ ಪ್ರಶ್ನೆಗೆ
ಅಸಮಾಧಾನ ಹೊರಹಾಕಿದ ಅಪ್ಪಾಜಿ ನಾಡಗೌಡ
ನಮ್ಮಲ್ಲಿ ಜಗದ್ಗುರು ಗಳು ಇದ್ದಾರೆಂದು ಅವರದ್ದೇ ಎಲ್ಲಾವೂ ನಡೆಯುತ್ತೆ ಎಂದು ತಮ್ಮ ಅಸಮಾಧಾನ ಹೊರ ಹಾಕಿದ ಅಪ್ಪಾಜಿ ನಾಡಗೌಡ.
ಸಚಿವ ಸ್ಥಾನ ಕೈತಪ್ಪಿದಕ್ಕೆ ಯಶವಂತ್ ರಾಯ್ ಪಾಟೀಲ್ ಬೆಂಬಲಿಗರಿಂದ ಪ್ರತಿಭಟನೆ ನಡೆಸಿದರು. ಶಾಸಕರ ಭವನದಲ್ಲಿ ಪ್ರತಿಭಟನೆ ಮಾಡುತ್ತಿರುವ ಬೆಂಬಲಿಗರು. ವಿಜಯಪುರ ಜಿಲ್ಲೆ ಇಂಡಿ ಕ್ಷೇತ್ರದ ಶಾಸಕ ಯಶವಂತ ರಾಯ್ ಪಾಟೀಲ್. ಮೂರು ಭಾರಿ ಶಾಸಕರಾಗಿ ಆಯ್ಕೆ ಆಗಿರುವ ಯಶವಂತ್ ರಾಯ್ ಪಾಟೀಲ್, ತಮ್ಮ ನಾಯಕರಿಗೆ ಸಚಿವ ಸ್ಥಾನ ತಪ್ಪಿದ್ದಕ್ಕೆ ಯಶವಂತ್ ರಾಯ್ ಫೋಟೋ ಹಿಡಿದು ಪ್ರತಿಭಟನೆ. ಪ್ರತಿಭಟನೆ ಜಾಗದಲ್ಲಿ ಅಹಿತಕರ ಘಟನೆ ನಡೆಯದಂತೆ ಪೊಲೀಸರಿಂದ ಬಿಗಿ ಭದ್ರತೆ.
ಇದಲ್ಲದೆ, ಸಚಿವಕಾಂಕ್ಷಿಗಳಾಗಿದ್ದ ಸಾಕಷ್ಟು ಶಾಸಕರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದು, ಅವರ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಅಸಮಾಧಾನವನ್ನು ಸಿಎಂ ಡಿಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಯಾವ ರೀತಿಯಲ್ಲಿ ನಿಯಂತ್ರಣಕ್ಕೆ ತರಲಿದ್ದಾರೆ ಎನ್ನುವುದು ಮಾತ್ರ ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ.








