ಬೈಂದೂರು: ಕರಾವಳಿಯ ಪ್ರಸಿದ್ಧ ಕಾರ್ಮಿಕ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಸಂಗಮದಲ್ಲಿರುವ *ಮರವಂತೆಯ ಶ್ರೀ ವರಾಹಸ್ವಾಮಿ ದೇವಸ್ಥಾನ ದಲ್ಲಿ ಪ್ರತಿ ವರ್ಷ ವಿಜೃಂಭಣೆಯಿಂದ ನಡೆಯುವ ಕರ್ಕಾಟಕ ಅಮಾವಾಸ್ಯೆ - ಭೀಮನ ಅಮಾವಾಸ್ಯೆ ಜಾತ್ರಾ ಮಹೋತ್ಸವ ದಲ್ಲಿ ಈ ಬಾರಿ ಭಾರೀ ಅವ್ಯವಸ್ಥೆ ಕಂಡುಬಂದಿದ್ದು, ಆಗಮಿಸಿದ ಸಾವಿರಾರು ಭಕ್ತರು ಮತ್ತು ಸ್ಥಳೀಯರು ಆಡಳಿತ ಮಂಡಳಿಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಾತ್ರೆಯಲ್ಲಿ ಕಂಡುಬಂದ ಪ್ರಮುಖ ಅವ್ಯವಸ್ಥೆಗಳು:
ಕಗ್ಗತ್ತಲೆಯಲ್ಲಿ ದೇವಾಲಯ
ವರ್ಷಕ್ಕೊಮ್ಮೆ ನಡೆಯುವ ಪವಿತ್ರ ಜಾತ್ರೆಗೆ ದೇವಾಲಯ ಮತ್ತು ಸುತ್ತಮುತ್ತಲಿನ ಆವರಣಕ್ಕೆ ಸೂಕ್ತ ವಿದ್ಯುತ್ ದೀಪಾಲಂಕಾರ ಮಾಡದೆ ಸಂಪೂರ್ಣ ನಿರ್ಲಕ್ಷ್ಯ ವಹಿಸಲಾಗಿತ್ತು. ರಾತ್ರಿ ಹೊತ್ತಿನಲ್ಲಿ ಭಕ್ತರು ಕತ್ತಲಲ್ಲಿ ಕಂಗಾಲಾದರು.
ಕುಡಿಯುವ ನೀರು ಮತ್ತು ಶೌಚಾಲಯ ಬಂದ್
ದೂರದಿಂದ ದರ್ಶನಕ್ಕೆ ಬಂದ ಭಕ್ತರಿಗೆ ಕನಿಷ್ಠ ಕುಡಿಯುವ ನೀರಿನ ವ್ಯವಸ್ಥೆಯೂ ಇರಲಿಲ್ಲ.
ಇದ್ದ ಶೌಚಾಲಯಗಳಿಗೂ ಬೀಗ ಹಾಕಲಾಗಿತ್ತು. ಇದರಿಂದ ಮಹಿಳೆಯರು, ವೃದ್ಧರು ಮತ್ತು ಮಕ್ಕಳು ತೀವ್ರ ಪರದಾಟ ಅನುಭವಿಸಿದರು.
ಪ್ರವಾಸೋದ್ಯಮ ಇಲಾಖೆ ಜಾಗದಲ್ಲಿ ವಸೂಲಿ*
ಪ್ರವಾಸೋದ್ಯಮ ಇಲಾಖೆಗೆ ಸೇರಿದ ಸರ್ಕಾರಿ ಜಾಗದಲ್ಲಿ ವ್ಯಾಪಾರಸ್ಥರಿಂದ ಅನಧಿಕೃತವಾಗಿ ಜಾಗದ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ.
ಭಕ್ತರ.?
ಲಕ್ಷಾಂತರ ರೂಪಾಯಿ ಹುಂಡಿ ಸಂಗ್ರಹವಾಗುವ ಈ ಕ್ಷೇತ್ರದಲ್ಲಿ ಮೂಲಭೂತ ಸೌಲಭ್ಯ ನೀಡಲು ಯಾಕೆ ಆಗಲ್ಲ? ವರ್ಷಕ್ಕೊಮ್ಮೆ ಬರುವ ಜಾತ್ರೆಗೆ ಇದೇನಾ ನಾವು ಕೊಡುವ ಗೌರವ?" ಎಂದು ಭಕ್ತರು ಆಡಳಿತ ಮಂಡಳಿಯನ್ನು ಪ್ರಶ್ನಿಸಿದ್ದಾರೆ.
ಭಕ್ತರ ಭಾವನೆಗಳ ಜೊತೆ ಆಟವಾಡಿದ ಈ ನಿರ್ಲಕ್ಷ್ಯಕ್ಕೆ ಆಡಳಿತ ಮಂಡಳಿ ಕೂಡಲೇ ಉತ್ತರ ನೀಡಬೇಕು ಮತ್ತು ಮುಂದಿನ ದಿನಗಳಲ್ಲಿ ಇಂತಹ ಅವ್ಯವಸ್ಥೆ ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಒತ್ತಾಯ.
ಈ ಬಗ್ಗೆ ದೇವಸ್ಥಾನ ಆಡಳಿತ ಮಂಡಳಿಯಿಂದ ಇನ್ನೂ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ.








