ಆರ್‌ಟಿಐ ಕಾರ್ಯಕರ್ತ' ಎಂಬುದು ಹೊಸ ದಂಧೆಯಾಗಿದೆ ಸುಪ್ರೀಂ ಕೋರ್ಟ್ ಮಾಹಿತಿ ಹಕ್ಕು ಕಾಯ್ದೆಯನ್ನು ದುರ್ಬಳಕೆ ಮಾಡುತ್ತಿರುವ RTI ಕಾರ್ಯಕರ್ತರು ಜಾಮೀನು ನಿರಾಕರಣೆ..

19 Aug 2026
ದೇಶ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ 'ಕಾರ್ಯಕರ್ತ'ರೆಂದು ಕರೆದುಕೊಳ್ಳುವುದು ಇತ್ತೀಚೆಗೆ ಹೊಸ ದಂಧೆಯಾಗಿ (ಬ್ಯುಸಿನೆಸ್) ಮಾರ್ಪಟ್ಟಿದೆ ಎಂದು ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ರಸ್ತೆ ಕಾಮಗಾರಿಗೆ ಹಾಗೂ ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಎದುರಿಸುತ್ತಿರುವ ಪಂಜಾಬ್‌ನ ಆರ್‌ಟಿಐ ಕಾರ್ಯಕರ್ತನಿಗೆ ನಿರೀಕ್ಷಣಾ ಜಾಮೀನು ನೀಡಲು ಸರ್ವೋಚ್ಚ ನ್ಯಾಯಾಲಯ ನಿರಾಕರಿಸಿದೆ.


ನ್ಯಾಯಮೂರ್ತಿಗಳಾದ ಸಂದೀಪ್ ಮೆಹ್ತಾ ಹಾಗೂ ವಿಜಯ್ ಬಿಷ್ಣೋಯ್ ಅವರಿದ್ದ ವಿಭಾಗೀಯ ಪೀಠವು, ಆರೋಪಿ ಆರ್‌ಟಿಐ ಕಾರ್ಯಕರ್ತ ರಾಕೇಶ್ ಕುಮಾರ್ ಬೆಹ್ಲ್ ಮತ್ತು ಆತನ ಸಹಚರ ರಾಜೀವ್ ಕುಮಾರ್ ಅಲಿಯಾಸ್ ಮಿಂಟು ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರ ವಜಾಗೊಳಿಸಿತು. ವಿಚಾರಣೆ ವೇಳೆ, ಸರ್ಕಾರಿ ಕಾಮಗಾರಿಗಳ ಮೇಲೆ ನಿಗಾ ಇಡಲು ಇವರಿಗಿರುವ ಅಧಿಕಾರವಾದರೂ ಏನು ಎಂದು ಪೀಠವು ಕಟುವಾಗಿ ಪ್ರಶ್ನಿಸಿತು. ಆರ್‌ಟಿಐ ಕಾರ್ಯಕರ್ತರೆಂದು ಹೇಳಿಕೊಳ್ಳುವುದು ಇದೀಗ ಹೊಸ ದಂಧೆಯಾಗಿದೆ; ಕೇಂದ್ರ ಸರ್ಕಾರ ರಸ್ತೆ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಿದೆ ಹಾಗೂ ಕಾಮಗಾರಿಯ ಉಸ್ತುವಾರಿಯನ್ನು ಸರ್ಕಾರವೇ ನೋಡಿಕೊಳ್ಳುತ್ತದೆ. ಹೀಗಿರುವಾಗ ಇದನ್ನು ಪ್ರಶ್ನಿಸಲು ನೀವ್ಯಾರು ಎಂದು ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಪ್ರಶ್ನಿಸಿದರು. ಅಲ್ಲದೆ, ಆರ್‌ಟಿಐ ಕಾರ್ಯಕರ್ತನೆಂದು ಹೇಳಿಕೊಳ್ಳುವ ಇದೊಂದು 'ಹಳದಿ ಪತ್ರಿಕೋದ್ಯಮ' ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು ಅರ್ಜಿಯನ್ನು ವಜಾಗೊಳಿಸಿದರು.


ಈ ಪ್ರಕರಣವು ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯ ಬಟಾಲಾದಲ್ಲಿ ನಡೆಯುತ್ತಿದ್ದ ರಸ್ತೆ ಕಾಮಗಾರಿಗೆ ಸಂಬಂಧಿಸಿದ್ದಾಗಿದೆ. ಈ ಕಾಮಗಾರಿಗೆ ಇಬ್ಬರು ಆರೋಪಿಗಳು ಅಡ್ಡಿಪಡಿಸಿದ್ದರು. ಕಾಮಗಾರಿಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ದೂರುದಾರರಿಗೆ ಬೆದರಿಕೆ ಹಾಕಿದ್ದಲ್ಲದೆ, ಸ್ಥಳದಲ್ಲಿದ್ದ ಕಾರ್ಮಿಕರ ಮೇಲೆ ಜಾತಿ ನಿಂದನೆ ಮಾಡಿ, ಹಲ್ಲೆ ನಡೆಸಿದ್ದರು ಎಂದು ಪೊಲೀಸ್ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.


ರಸ್ತೆ ಕಾಮಗಾರಿಯಲ್ಲಿನ ಭ್ರಷ್ಟಾಚಾರವನ್ನು ಬಯಲಿಗೆಳೆದಿದ್ದಕ್ಕಾಗಿ ತಮ್ಮನ್ನು ಈ ಪ್ರಕರಣದಲ್ಲಿ ಸುಳ್ಳು ಆರೋಪದಲ್ಲಿ ಸಿಲುಕಿಸಲಾಗಿದೆ ಎಂದು ಆರೋಪಿಗಳ ಪರ ವಕೀಲರು ನ್ಯಾಯಾಲಯದಲ್ಲಿ ವಾದಿಸಿದ್ದರು. ಆದರೆ, ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿರುವುದು ಮತ್ತು ಹಲ್ಲೆ ನಡೆಸಿರುವುದು ಎಫ್‌ಐಆರ್‌ನಲ್ಲಿ ಸ್ಪಷ್ಟವಾಗಿರುವುದರಿಂದ ನಿರೀಕ್ಷಣಾ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮೇ 14ರಂದೇ ಆದೇಶಿಸಿತ್ತು.

Recently Updated:

ಆಂಧ್ರಪ್ರದೇಶ ಪರಿಶಿಷ್ಟ ಜಾತಿ ಸಮುದಾಯದ ಹೈಕೋರ್ಟ್ ತೀರ್ಪನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿಯುವ ಮೂಲಕ ಸುಪ್ರೀಂಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ.ಆಂಧ್ರಪ್ರದೇಶ ಪರಿಶಿಷ್ಟ ಜಾತಿ ಸಮುದಾಯದ ಹೈಕೋರ್ಟ್ ತೀರ್ಪನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿಯುವ ಮೂಲಕ ಸುಪ್ರೀಂಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ.
ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯವಾದ್ರೆ ಜೈಲು ಫಿಕ್ಸ್ : ದೇಶಾದ್ಯಂತ 'ಎಸ್ಮಾ' ಜಾರಿಗೊಳಿಸಿದ ಕೇಂದ್ರ ಸರ್ಕಾರ ವಿತರಣೆ ವಿಳಂಬ ಮತ್ತು ಪೂರೈಕೆ ಕೊರತೆ ಬಗ್ಗೆ ವರದಿಗಳು ಬರುತ್ತಿರುವ ಹಿನ್ನೆಲೆಯಲ್ಲಿ, ಸಂಗ್ರಹಿಸಿ ಇಡುವುದನ್ನು ತಡೆಯಲು ಮತ್ತು ಸಮಾನವಾಗಿ ವಿತರಣೆ ನಡೆಯಲು ಸರ್ಕಾರವು   ಕಾಯ್ದೆ ಅಡಿಯಲ್ಲಿ ಕಠಿಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯವಾದ್ರೆ ಜೈಲು ಫಿಕ್ಸ್ : ದೇಶಾದ್ಯಂತ 'ಎಸ್ಮಾ' ಜಾರಿಗೊಳಿಸಿದ ಕೇಂದ್ರ ಸರ್ಕಾರ ವಿತರಣೆ ವಿಳಂಬ ಮತ್ತು ಪೂರೈಕೆ ಕೊರತೆ ಬಗ್ಗೆ ವರದಿಗಳು ಬರುತ್ತಿರುವ ಹಿನ್ನೆಲೆಯಲ್ಲಿ, ಸಂಗ್ರಹಿಸಿ ಇಡುವುದನ್ನು ತಡೆಯಲು ಮತ್ತು ಸಮಾನವಾಗಿ ವಿತರಣೆ ನಡೆಯಲು ಸರ್ಕಾರವು ಕಾಯ್ದೆ ಅಡಿಯಲ್ಲಿ ಕಠಿ
ಉಚಿತ ಕೊಡುಗೆಗಳು ಖಂಡಿಸಿದ  ಸುಪ್ರೀಂ ಕೋರ್ಟ್ ಶ್ರೀಮಂತ ಮತ್ತು ಬಡವರ ನಡುವೆ ವ್ಯತ್ಯಾಸವಿಲ್ಲದೆ ಎಲ್ಲರಿಗೂ ಉಚಿತವಾಗಿ ನೀಡುವುದು ತಪ್ಪು ಎಂದು ಎಚ್ಚರಿಸಿದ ನ್ಯಾಯ ಪೀಠ.ಉಚಿತ ಕೊಡುಗೆಗಳು ಖಂಡಿಸಿದ ಸುಪ್ರೀಂ ಕೋರ್ಟ್ ಶ್ರೀಮಂತ ಮತ್ತು ಬಡವರ ನಡುವೆ ವ್ಯತ್ಯಾಸವಿಲ್ಲದೆ ಎಲ್ಲರಿಗೂ ಉಚಿತವಾಗಿ ನೀಡುವುದು ತಪ್ಪು ಎಂದು ಎಚ್ಚರಿಸಿದ ನ್ಯಾಯ ಪೀಠ.
ಕಾಶ್ಮೀರದ ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಹಾಶಿಮ್ ಮೂಸಾ ಅಲಿಯಾಸ್ ಸುಲೇಮಾನ್ ಮೂಸಾನನ್ನು ಭಾರತೀಯ ಸೇನೆಯ ವಿಶೇಷ ಪಡೆಗಳು ಇಂದು ಎನ್ಕೌಂಟರ್. ಕಾಶ್ಮೀರದ ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಹಾಶಿಮ್ ಮೂಸಾ ಅಲಿಯಾಸ್ ಸುಲೇಮಾನ್ ಮೂಸಾನನ್ನು ಭಾರತೀಯ ಸೇನೆಯ ವಿಶೇಷ ಪಡೆಗಳು ಇಂದು ಎನ್ಕೌಂಟರ್.
ಹೊಸದಿಲ್ಲಿ ಜು25: ಆರೆಸಸ್ ಮತ್ತು ಮುಸ್ಲಿಂ ಧರ್ಮಗುರುಗಳು ಸಭೆ. ಹೊಸದಿಲ್ಲಿ ಜು25: ಆರೆಸಸ್ ಮತ್ತು ಮುಸ್ಲಿಂ ಧರ್ಮಗುರುಗಳು ಸಭೆ.
ಆಪರೇಷನ್ ಸಿಂಧೂರ್' ಪಾಕಿಸ್ತಾನದ 100 ಕಿಮೀ ಒಳಗೆ ನುಗ್ಗಿ ಹೊಡೆದು ಸೇಡು ತೀರಿಸಿಕೊಂಡ ಭಾರತೀಯ ಸೇನೆ..!! `ಆಪರೇಷನ್ ಸಿಂಧೂರ್' ಪಾಕಿಸ್ತಾನದ 100 ಕಿಮೀ ಒಳಗೆ ನುಗ್ಗಿ ಹೊಡೆದು ಸೇಡು ತೀರಿಸಿಕೊಂಡ ಭಾರತೀಯ ಸೇನೆ..!! `
ಮೋಹನ್ ಭಾಗವತ್, ಮುಸ್ಲಿಮರು ಸಹ RSS ಸೇರಬಹುದು, ಆದ್ರೆ ಕಂಡೀಷನ್ ಅಪ್ಲೈ.ಮೋಹನ್ ಭಾಗವತ್, ಮುಸ್ಲಿಮರು ಸಹ RSS ಸೇರಬಹುದು, ಆದ್ರೆ ಕಂಡೀಷನ್ ಅಪ್ಲೈ.
ಕರ್ನಾಟಕದಲ್ಲಿ ವಕ್ಫ್ ಆಸ್ತಿಯನ್ನು ಕಬಳಿಸಿದ ರಾಜಕಾರಣಿಗಳ ಹೆಸರನ್ನು ಸದನದ ಕಲಾಪದ ವೇಳೆ ಬಹಿರಂಗಪಡಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಮುಜುಗರ..! ಕರ್ನಾಟಕದಲ್ಲಿ ವಕ್ಫ್ ಆಸ್ತಿಯನ್ನು ಕಬಳಿಸಿದ ರಾಜಕಾರಣಿಗಳ ಹೆಸರನ್ನು ಸದನದ ಕಲಾಪದ ವೇಳೆ ಬಹಿರಂಗಪಡಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಮುಜುಗರ..!
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಲಿಸಿದ ಮಾಜಿ ಮುಖ್ಯಮಂತ್ರಿ  ಪುತ್ರ ಪರ್ವೇಶ್ ವರ್ಮಾ..!ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಲಿಸಿದ ಮಾಜಿ ಮುಖ್ಯಮಂತ್ರಿ ಪುತ್ರ ಪರ್ವೇಶ್ ವರ್ಮಾ..!