2022ನೇ ಸಾಲಿನಲ್ಲಿ ಬೀದರ ಜಿಲ್ಲೆಯ ಮುಡಬಿ ಪೊಲೀಸ್ ಠಾಣೆಯ ವ್ಯಾಪ್ತಿಯ ಘಾಟ ಹಿಪ್ಪರಗಾ ಗ್ರಾಮದಲ್ಲಿ ಘಟನೆ ಜರುಗಿದ್ದು, ಮುಡಬಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂ: 23/2022, ಕಲಂ: 302 ಐ.ಪಿ.ಸಿ ಅಡಿಯಲ್ಲಿ ಅಂದಿನ ಪಿ.ಎಸ್.ಐ ಶ್ರೀ ಬಸಲಿಂಗಪ್ಪ, ರವರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಪ್ರಕರಣದ ಮುಂದಿನ ತನಿಖೆಯನ್ನು ಅಂದಿನ ಮಂಠಾಳ ವೃತ್ತದ ಸಿ.ಪಿ.ಐ ಶ್ರೀ ರಘುವೀರಸಿಂಗ್ ಠಾಕೂರ್ ರವರು ತನಿಖೆಯನ್ನು ಅಚ್ಚುಕಟ್ಟಾಗಿ ನಡೆಸಿ ದೊಷರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿರುತ್ತಾರೆ.
ಮಾನ್ಯ ನ್ಯಾಯಾಲಯದ ಎಸ್.ಸಿ ಸಂ: 5042/2022 ರಂತೆ ಪ್ರಕರಣದ ಮುಂದಿನ ವಿಚಾರಣೆಯು ಮಾನ್ಯ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಬಸವಕಲ್ಯಾಣದಲ್ಲಿ ಶ್ರೀ ಬಸವಂತ ರೆಡ್ಡಿ, ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರು ಶಿಸ್ತು ಬದ್ಧವಾಗಿ ವಾದ ಮಂಡಿಸಿದ್ದರಿಂದ ಮಾನ್ಯ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧಿಶರವರಾದ ಮಾನ್ಯ ಶ್ರೀ ರಾಘವೇಂದ್ರ ಎಸ್ ಚನ್ನಬಸಪ್ಪ, ರವರು ಆರೋಪಿತನಿಗೆ ಜೀವಾವಧಿ ಶಿಕ್ಷೆ ಮತ್ತು 25,000=00 ಸಾವಿರ ರೂಪಾಯಿ ದಂಡ ವಿಧಿಸಿರುತ್ತಾರೆ.
ಪ್ರಕರಣದ ತನಿಖೆಯನ್ನು ಶಿಸ್ತು ಬದ್ದವಾಗಿ ಮಾಡಿ ನ್ಯಾಯಾಲಯಕ್ಕೆ ದೊಷಾರೋಪಣೆ ಪಟ್ಟಿ ಸಲ್ಲಿಸಿದ ಸಿಪಿಐ ರಘುವೀರಸಿಂಗ್ ಠಾಕೂರ್ ರವರು ಮತ್ತು ತನಿಖೆಗೆ ಸಹಕರಿಸಿದ ತನಿಖಾ ಸಹಾಯಕ ಶ್ರೀ ಪ್ರಕಾಶ್, ಕೋರ್ಟ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀ ದೇವರಾಜ್, ಮುಡಬಿ ಪೊಲೀಸ್ ಠಾಣೆ. ಹಾಗೂ ಸರ್ಕಾರದ ಪರವಾಗಿ ವಾದ ಮಂಡಿಸಿದ ಶ್ರೀ ಬಸವಂತ ರೆಡ್ಡಿ, ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರವರಿಗೆ ಅಭಿನಂದನೆಗಳು.
ಆರೋಪಿತನಿಗೆ ಕಠಿಣ ಶಿಕ್ಷೆ ಕೊಡಿಸುವಲ್ಲಿ ಹಾಗೂ ಅಪರಾಧ ಮುಕ್ತ ಜಿಲ್ಲೆಗೊಳಿಸಲು ಜಿಲ್ಲೆಯ ಪೊಲೀಸರ ಕಾರ್ಯಾಚರಣೆಯು ಮುಂದುವರೆಯಲಿದೆ....
ಪ್ರದೀಪ್ ಗುಂಟಿ, , ಐ.ಪಿ.ಎಸ್. ಪೊಲೀಸ್ ವರಿಷ್ಠಾಧಿಕಾರಿಗಳು,
ಬೀದರ ಜಿಲ್ಲೆ.








