ಇಂಟಲಿಜೆನ್ಸ್ನ ಡಿಐಜಿ ಆಗಿದ್ದ ಸುಧೀರ್ ಕುಮಾರ್ ರೆಡ್ಡಿ ಸಿ.ಎಚ್ ಅವರನ್ನು ಮಂಗಳೂರು ನಗರದ ಡೆಪ್ಯುಟಿ ಇನ್ಸ್ಪೆಕ್ಟರ್ ಜನರಲ್ ಮತ್ತು ಕಮಿಷನರ್ ಆಫ್ ಪೊಲೀಸ್ ಆಗಿ ವರ್ಗಾಯಿಸಲಾಗಿದೆ. ಉಡುಪಿಯ ಸೂಪರಿಂಟೆಂಡೆಂಟ್ ಆಗಿದ್ದ ಡಾ. ಅರುಣ್ ಕೆ. ಅವರನ್ನು ದಕ್ಷಿಣ ಕನ್ನಡ, ಮಂಗಳೂರಿನ ಎಸ್ಪಿ ಆಗಿ ವರ್ಗಾಯಿಸಲಾಗಿದೆ. ಇಂಟಲಿಜೆನ್ಸ್ನ ಎಸ್ಪಿ ಆಗಿದ್ದ ಹರಿರಾಮ್ ಶಂಕರ್ ಅವರನ್ನು ಉಡುಪಿಯ ಎಸ್ಪಿ ಆಗಿ ವರ್ಗಾಯಿಸಲಾಗಿದೆ.
ಮಂಗಳೂರು ನಗರದ ಡಿಐಜಿ ಹಾಗೂ ಆಯುಕ್ತರಾಗಿದ್ದ ಅನುಪಮ್ ಅಗರವಾಲ್ ಅವರನ್ನು ಆರ್ಥಿಕ ಅಪರಾಧಗಳ ಹಾಗೂ ಅಪರಾಧ ತನಿಖೆ ವಿಭಾಗದ ಡಿಐಜಿ ಆಗಿ ಟ್ರಾನ್ಸ್ಫರ್ ಮಾಡಲಾಗಿದೆ. ಸೈಬರ್ ಕ್ರೈಂ ಮತ್ತು ನಾರ್ಕೋಟಿಕ್ಸ್ ಹಾಗೂ ಅಪರಾಧ ತನಿಖೆ ವಿಭಾಗದ ಡಿಐಜಿ ಆಗಿದ್ದ ಬೋರಸೆ ಭೂಷಣ್ ಗುಲಾಬ್ರಾವ್ ಅವರನ್ನು ಬೆಳಗಾವಿ ನಗರದ ಡಿಐಜಿ ಮತ್ತು ಆಯುಕ್ತರಾಗಿ ವರ್ಗಾಯಿಸಲಾಗಿದೆ.








